ಫೆಬ್ರವರಿ 1 ರಂದು ಬೆಳಿಗ್ಗೆ 11 ಗಂಟೆಗೆ ಕೇಂದ್ರ ಬಜೆಟ್ ಮಂಡನೆ ಆಗಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಂ ಬಜೆಟ್ ಮಂಡನೆ ನಡೆಸಲಿದ್ದಾರೆ. ಒಂದು ದಿನ ಮುಂಚಿತವಾಗಿ ಜನವರಿ 31 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕೋವಿಡ್-19 ಮಾರ್ಗಸೂಚಿಗಳ ದೃಷ್ಟಿಯಿಂದ ಲೋಕಸಭೆ ಮತ್ತು ರಾಜ್ಯಸಭೆಯು ಕಾರ್ಯನಿರ್ವಹಿಸುತ್ತದೆ. ಹೀಗಾಗಿ ಸಮಯದಲ್ಲಿ ಬದಲಾವಣೆ ಇರುವ ಸಾಧ್ಯತೆ ಇದೆ. ಜನವರಿ 31 ಮತ್ತು ಫೆಬ್ರವರಿ 1 ರಂದು, ಎರಡೂ ಸದನಗಳ ಸಮಯವು ಬೆಳಿಗ್ಗೆ 11 ರಿಂದ ಇರುತ್ತದೆ ಎಂದು ಎಂದು ಲೋಕಸಭೆಯ ಬುಲೆಟಿನ್ ತಿಳಿಸಿದೆ.
ಜನವರಿ 31 ರಿಂದ ಪ್ರಾರಂಭವಾಗುವ ಬಜೆಟ್ ಅಧಿವೇಶನದಲ್ಲಿ ಕೋವಿಡ್ ಮಾನದಂಡಗಳೊಂದಿದೆ ಸಂಸತ್ತಿನ ಎರಡು ಸದನಗಳು ದಿನದ ಪ್ರತ್ಯೇಕ ಸಮಯಗಳಲ್ಲಿ ತಲಾ ಐದು ಗಂಟೆಗಳ ಕಾಲ ನಡೆಯಲಿದೆ. ಮೊದಲಾರ್ಧದಲ್ಲಿ ರಾಜ್ಯಸಭೆ ಮತ್ತು ದ್ವಿತೀಯಾರ್ಧದಲ್ಲಿ ಲೋಕಸಭೆ. ಲೋಕಸಭೆಯು ಫೆಬ್ರವರಿ 1 ರಂದು ಬೆಳೆಗ್ಗೆ 11 ಗಂಟೆಗೆ ಕೇಂದ್ರ ಬಜೆಟ್ ಮಂಡನೆಗಾಗಿ ಸಭೆ ಸೇರಲಿದ್ದು, ಫೆಬ್ರವರಿ 2 ರಿಂದ ಫೆಬ್ರವರಿ 11 ರವರೆಗೆ ಸಂಜೆ 4 ರಿಂದ ರಾತ್ರಿ 9 ರವರೆಗೆ ಅಧಿವೇಶನ ನಡೆಯಲಿದೆ.
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.…
ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…