ಫೆಬ್ರವರಿ 1 ರಂದು ಬೆಳಿಗ್ಗೆ 11 ಗಂಟೆಗೆ ಕೇಂದ್ರ ಬಜೆಟ್ ಮಂಡನೆ ಆಗಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಂ ಬಜೆಟ್ ಮಂಡನೆ ನಡೆಸಲಿದ್ದಾರೆ. ಒಂದು ದಿನ ಮುಂಚಿತವಾಗಿ ಜನವರಿ 31 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕೋವಿಡ್-19 ಮಾರ್ಗಸೂಚಿಗಳ ದೃಷ್ಟಿಯಿಂದ ಲೋಕಸಭೆ ಮತ್ತು ರಾಜ್ಯಸಭೆಯು ಕಾರ್ಯನಿರ್ವಹಿಸುತ್ತದೆ. ಹೀಗಾಗಿ ಸಮಯದಲ್ಲಿ ಬದಲಾವಣೆ ಇರುವ ಸಾಧ್ಯತೆ ಇದೆ. ಜನವರಿ 31 ಮತ್ತು ಫೆಬ್ರವರಿ 1 ರಂದು, ಎರಡೂ ಸದನಗಳ ಸಮಯವು ಬೆಳಿಗ್ಗೆ 11 ರಿಂದ ಇರುತ್ತದೆ ಎಂದು ಎಂದು ಲೋಕಸಭೆಯ ಬುಲೆಟಿನ್ ತಿಳಿಸಿದೆ.
ಜನವರಿ 31 ರಿಂದ ಪ್ರಾರಂಭವಾಗುವ ಬಜೆಟ್ ಅಧಿವೇಶನದಲ್ಲಿ ಕೋವಿಡ್ ಮಾನದಂಡಗಳೊಂದಿದೆ ಸಂಸತ್ತಿನ ಎರಡು ಸದನಗಳು ದಿನದ ಪ್ರತ್ಯೇಕ ಸಮಯಗಳಲ್ಲಿ ತಲಾ ಐದು ಗಂಟೆಗಳ ಕಾಲ ನಡೆಯಲಿದೆ. ಮೊದಲಾರ್ಧದಲ್ಲಿ ರಾಜ್ಯಸಭೆ ಮತ್ತು ದ್ವಿತೀಯಾರ್ಧದಲ್ಲಿ ಲೋಕಸಭೆ. ಲೋಕಸಭೆಯು ಫೆಬ್ರವರಿ 1 ರಂದು ಬೆಳೆಗ್ಗೆ 11 ಗಂಟೆಗೆ ಕೇಂದ್ರ ಬಜೆಟ್ ಮಂಡನೆಗಾಗಿ ಸಭೆ ಸೇರಲಿದ್ದು, ಫೆಬ್ರವರಿ 2 ರಿಂದ ಫೆಬ್ರವರಿ 11 ರವರೆಗೆ ಸಂಜೆ 4 ರಿಂದ ರಾತ್ರಿ 9 ರವರೆಗೆ ಅಧಿವೇಶನ ನಡೆಯಲಿದೆ.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…