ಬೆಳ್ಳಾರೆ: ಸುಸ್ಥಿರ ಅಭಿವೃದ್ದಿಯ ಗುರಿಗಳ ವ್ಯಾಪ್ತಿಯು ಬಹಳ ವಿಶಾಲವಾಗಿದ್ದು, 2025ರ ವೇಳೆಗೆ ಈ ಗುರಿಗಳನ್ನು ನನಸಾಗಿಸಿಕೊಳ್ಳುವ ಪ್ರಯತ್ನ ನಡೆಸಬೇಕು ಎಂದು ರಾಜ್ಯ ಸುಸ್ಥಿರ ಅಭಿವೃದ್ಧಿ ಗುರಿಗಳ ಯೋಜನಾ ಆಯೋಗದ ಮುಖ್ಯ ಸಲಹೆಗಾರ್ತಿ ರೂಪಾ ಎಸ್.ಗೌಡ ಹೇಳಿದರು.
ಚಿಕ್ಕಮಗಳೂರಿನ ಮಯೂರ ಫೌಂಡೇಷನ್ ಹಾಗು ಸಮಾಜಕಾರ್ಯ ವಿಭಾದ ಸಹಭಾಗಿತ್ವದಲ್ಲಿ ಪೆರುವಾಜೆ ಡಾ|ಕೆ. ಶಿವರಾಮ ಕಾರಂತ ಕಾಲೇಜಿನಲ್ಲಿ ನಡೆದ ಸುಸ್ಥಿರ ಅಭಿವೃದ್ದಿಯ ಗುರಿಗಳು ಕಾರ್ಯಾಗಾರವನ್ನು ಉದ್ಘಾಟಿಸಿ ಮಾಹಿತಿ ನೀಡಿದ ಅವರು ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬನೂ ಈ ಯೋಜನೆಯ ಸೌಲಭ್ಯವನ್ನು ಪಡೆಯುವಮತಾಗಬೇಕು. ಇದಕ್ಕಾಗಿ ನಾವೆಲ್ಲ ಪ್ರಾಮಾಣಿಕತನದಿಂದ ಶ್ರಮಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ರಾಘವ ಅವರು ವಹಿಸಿದರು. ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಅರ್ಚನಾ, ಯತೀಶ್ಕುಮಾರ್, ಗಿರೀಶ್ ಉಪಸ್ಥಿತರಿದ್ದರು. ಪದವಿ ವಿದ್ಯಾರ್ಥಿನಿ ಕಾವ್ಯ ವಂದಿಸಿ, ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ರಮೇಶ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರು, ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದರು.
ಬ್ರೇಡ್ ಪಿಜ್ಜಾಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಬ್ರೇಡ್ ಪೀಸ್…
ಡಾ. ವಿಘ್ನೇಶ್ವರ ವರ್ಮುಡಿ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿದ್ದ ಲೇಖನಗಳನ್ನು ವಿಶ್ವದ ಬೇರೆ…
ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್…
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…