ಬೆಳ್ಳಾರೆ: ಸುಸ್ಥಿರ ಅಭಿವೃದ್ದಿಯ ಗುರಿಗಳ ವ್ಯಾಪ್ತಿಯು ಬಹಳ ವಿಶಾಲವಾಗಿದ್ದು, 2025ರ ವೇಳೆಗೆ ಈ ಗುರಿಗಳನ್ನು ನನಸಾಗಿಸಿಕೊಳ್ಳುವ ಪ್ರಯತ್ನ ನಡೆಸಬೇಕು ಎಂದು ರಾಜ್ಯ ಸುಸ್ಥಿರ ಅಭಿವೃದ್ಧಿ ಗುರಿಗಳ ಯೋಜನಾ ಆಯೋಗದ ಮುಖ್ಯ ಸಲಹೆಗಾರ್ತಿ ರೂಪಾ ಎಸ್.ಗೌಡ ಹೇಳಿದರು.
ಚಿಕ್ಕಮಗಳೂರಿನ ಮಯೂರ ಫೌಂಡೇಷನ್ ಹಾಗು ಸಮಾಜಕಾರ್ಯ ವಿಭಾದ ಸಹಭಾಗಿತ್ವದಲ್ಲಿ ಪೆರುವಾಜೆ ಡಾ|ಕೆ. ಶಿವರಾಮ ಕಾರಂತ ಕಾಲೇಜಿನಲ್ಲಿ ನಡೆದ ಸುಸ್ಥಿರ ಅಭಿವೃದ್ದಿಯ ಗುರಿಗಳು ಕಾರ್ಯಾಗಾರವನ್ನು ಉದ್ಘಾಟಿಸಿ ಮಾಹಿತಿ ನೀಡಿದ ಅವರು ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬನೂ ಈ ಯೋಜನೆಯ ಸೌಲಭ್ಯವನ್ನು ಪಡೆಯುವಮತಾಗಬೇಕು. ಇದಕ್ಕಾಗಿ ನಾವೆಲ್ಲ ಪ್ರಾಮಾಣಿಕತನದಿಂದ ಶ್ರಮಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ರಾಘವ ಅವರು ವಹಿಸಿದರು. ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಅರ್ಚನಾ, ಯತೀಶ್ಕುಮಾರ್, ಗಿರೀಶ್ ಉಪಸ್ಥಿತರಿದ್ದರು. ಪದವಿ ವಿದ್ಯಾರ್ಥಿನಿ ಕಾವ್ಯ ವಂದಿಸಿ, ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ರಮೇಶ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರು, ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದರು.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…