ಬೆಳ್ಳಾರೆ: ಸುಸ್ಥಿರ ಅಭಿವೃದ್ದಿಯ ಗುರಿಗಳ ವ್ಯಾಪ್ತಿಯು ಬಹಳ ವಿಶಾಲವಾಗಿದ್ದು, 2025ರ ವೇಳೆಗೆ ಈ ಗುರಿಗಳನ್ನು ನನಸಾಗಿಸಿಕೊಳ್ಳುವ ಪ್ರಯತ್ನ ನಡೆಸಬೇಕು ಎಂದು ರಾಜ್ಯ ಸುಸ್ಥಿರ ಅಭಿವೃದ್ಧಿ ಗುರಿಗಳ ಯೋಜನಾ ಆಯೋಗದ ಮುಖ್ಯ ಸಲಹೆಗಾರ್ತಿ ರೂಪಾ ಎಸ್.ಗೌಡ ಹೇಳಿದರು.
ಚಿಕ್ಕಮಗಳೂರಿನ ಮಯೂರ ಫೌಂಡೇಷನ್ ಹಾಗು ಸಮಾಜಕಾರ್ಯ ವಿಭಾದ ಸಹಭಾಗಿತ್ವದಲ್ಲಿ ಪೆರುವಾಜೆ ಡಾ|ಕೆ. ಶಿವರಾಮ ಕಾರಂತ ಕಾಲೇಜಿನಲ್ಲಿ ನಡೆದ ಸುಸ್ಥಿರ ಅಭಿವೃದ್ದಿಯ ಗುರಿಗಳು ಕಾರ್ಯಾಗಾರವನ್ನು ಉದ್ಘಾಟಿಸಿ ಮಾಹಿತಿ ನೀಡಿದ ಅವರು ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬನೂ ಈ ಯೋಜನೆಯ ಸೌಲಭ್ಯವನ್ನು ಪಡೆಯುವಮತಾಗಬೇಕು. ಇದಕ್ಕಾಗಿ ನಾವೆಲ್ಲ ಪ್ರಾಮಾಣಿಕತನದಿಂದ ಶ್ರಮಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ರಾಘವ ಅವರು ವಹಿಸಿದರು. ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಅರ್ಚನಾ, ಯತೀಶ್ಕುಮಾರ್, ಗಿರೀಶ್ ಉಪಸ್ಥಿತರಿದ್ದರು. ಪದವಿ ವಿದ್ಯಾರ್ಥಿನಿ ಕಾವ್ಯ ವಂದಿಸಿ, ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ರಮೇಶ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರು, ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದರು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…