ಬೆಳ್ಳಾರೆ: ಸುಸ್ಥಿರ ಅಭಿವೃದ್ದಿಯ ಗುರಿಗಳ ವ್ಯಾಪ್ತಿಯು ಬಹಳ ವಿಶಾಲವಾಗಿದ್ದು, 2025ರ ವೇಳೆಗೆ ಈ ಗುರಿಗಳನ್ನು ನನಸಾಗಿಸಿಕೊಳ್ಳುವ ಪ್ರಯತ್ನ ನಡೆಸಬೇಕು ಎಂದು ರಾಜ್ಯ ಸುಸ್ಥಿರ ಅಭಿವೃದ್ಧಿ ಗುರಿಗಳ ಯೋಜನಾ ಆಯೋಗದ ಮುಖ್ಯ ಸಲಹೆಗಾರ್ತಿ ರೂಪಾ ಎಸ್.ಗೌಡ ಹೇಳಿದರು.
ಚಿಕ್ಕಮಗಳೂರಿನ ಮಯೂರ ಫೌಂಡೇಷನ್ ಹಾಗು ಸಮಾಜಕಾರ್ಯ ವಿಭಾದ ಸಹಭಾಗಿತ್ವದಲ್ಲಿ ಪೆರುವಾಜೆ ಡಾ|ಕೆ. ಶಿವರಾಮ ಕಾರಂತ ಕಾಲೇಜಿನಲ್ಲಿ ನಡೆದ ಸುಸ್ಥಿರ ಅಭಿವೃದ್ದಿಯ ಗುರಿಗಳು ಕಾರ್ಯಾಗಾರವನ್ನು ಉದ್ಘಾಟಿಸಿ ಮಾಹಿತಿ ನೀಡಿದ ಅವರು ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬನೂ ಈ ಯೋಜನೆಯ ಸೌಲಭ್ಯವನ್ನು ಪಡೆಯುವಮತಾಗಬೇಕು. ಇದಕ್ಕಾಗಿ ನಾವೆಲ್ಲ ಪ್ರಾಮಾಣಿಕತನದಿಂದ ಶ್ರಮಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ರಾಘವ ಅವರು ವಹಿಸಿದರು. ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಅರ್ಚನಾ, ಯತೀಶ್ಕುಮಾರ್, ಗಿರೀಶ್ ಉಪಸ್ಥಿತರಿದ್ದರು. ಪದವಿ ವಿದ್ಯಾರ್ಥಿನಿ ಕಾವ್ಯ ವಂದಿಸಿ, ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ರಮೇಶ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರು, ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದರು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…