ಬೆಳ್ಳಾರೆ: ಸುಸ್ಥಿರ ಅಭಿವೃದ್ದಿಯ ಗುರಿಗಳ ವ್ಯಾಪ್ತಿಯು ಬಹಳ ವಿಶಾಲವಾಗಿದ್ದು, 2025ರ ವೇಳೆಗೆ ಈ ಗುರಿಗಳನ್ನು ನನಸಾಗಿಸಿಕೊಳ್ಳುವ ಪ್ರಯತ್ನ ನಡೆಸಬೇಕು ಎಂದು ರಾಜ್ಯ ಸುಸ್ಥಿರ ಅಭಿವೃದ್ಧಿ ಗುರಿಗಳ ಯೋಜನಾ ಆಯೋಗದ ಮುಖ್ಯ ಸಲಹೆಗಾರ್ತಿ ರೂಪಾ ಎಸ್.ಗೌಡ ಹೇಳಿದರು.
ಚಿಕ್ಕಮಗಳೂರಿನ ಮಯೂರ ಫೌಂಡೇಷನ್ ಹಾಗು ಸಮಾಜಕಾರ್ಯ ವಿಭಾದ ಸಹಭಾಗಿತ್ವದಲ್ಲಿ ಪೆರುವಾಜೆ ಡಾ|ಕೆ. ಶಿವರಾಮ ಕಾರಂತ ಕಾಲೇಜಿನಲ್ಲಿ ನಡೆದ ಸುಸ್ಥಿರ ಅಭಿವೃದ್ದಿಯ ಗುರಿಗಳು ಕಾರ್ಯಾಗಾರವನ್ನು ಉದ್ಘಾಟಿಸಿ ಮಾಹಿತಿ ನೀಡಿದ ಅವರು ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬನೂ ಈ ಯೋಜನೆಯ ಸೌಲಭ್ಯವನ್ನು ಪಡೆಯುವಮತಾಗಬೇಕು. ಇದಕ್ಕಾಗಿ ನಾವೆಲ್ಲ ಪ್ರಾಮಾಣಿಕತನದಿಂದ ಶ್ರಮಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ರಾಘವ ಅವರು ವಹಿಸಿದರು. ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಅರ್ಚನಾ, ಯತೀಶ್ಕುಮಾರ್, ಗಿರೀಶ್ ಉಪಸ್ಥಿತರಿದ್ದರು. ಪದವಿ ವಿದ್ಯಾರ್ಥಿನಿ ಕಾವ್ಯ ವಂದಿಸಿ, ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ರಮೇಶ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರು, ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…