Advertisement
ಸುದ್ದಿಗಳು

“ಹಸಿರು ಭವಿಷ್ಯ”ಕ್ಕಾಗಿ ಪರಿಸರ ಸಮ್ಮೇಳನ

Share

ದಕ್ಷಿಣ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು ಮತ್ತು ಸಮಿತಿಗಳ ಸಹೋಗದೊಂದಿಗೆ ಚೆನ್ನೈನ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ದಕ್ಷಿಣ ವಲಯ ಪೀಠವು ಆಯೋಜಿಸಿದ್ದ ಪರಿಸರದ ಕುರಿತಾದ ಪ್ರಾದೇಶಿಕ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಈ 2025 ಸಮ್ಮೇಳನವನ್ನು ಎನ್ಜಿಟಿ ಅಧ್ಯಕ್ಷರಾದ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಅವರ ನೇತೃತ್ವದಲ್ಲಿ, ಚೆನ್ನೈನ ದಕ್ಷಿಣ ವಲಯ ಪೀಠದ ಎನ್ಜಿಟಿ ನ್ಯಾಯಾಂಗ ಸದಸ್ಯರಾದ ನ್ಯಾಯಮೂರ್ತಿ ಪುಷ್ಪಾ ಸತ್ಯನಾರಾಯಣ ಅವರ ಮಾರ್ಗದರ್ಶನದಲ್ಲಿ ನಡೆಸಲಾಯಿತು.

ಕರ್ನಾಟಕದ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಅಧ್ಯಕ್ಷತೆಯಲ್ಲಿ ಕರಾವಳಿ ವಲಯಗಳನ್ನು ರಕ್ಷಿಸುವಲ್ಲಿನ ಸವಾಲುಗಳ ಕುರಿತು ನಡೆದ ಸಭೆಯಲ್ಲಿ, ಪ್ಲಾಸ್ಟಿಕ್ ಮಾಲಿನ್ಯ ಮತ್ತು ನಗರಾಭಿವೃದ್ಧಿಯಂತಹ ಮಾನವ ಚಟುವಟಿಕೆಗಳು ಸಮುದ್ರ ಜೀವಿಗಳು ಬೀರುವ ತೀವ್ರ ಪರಿಸರ ಪರಿಣಾಮವನ್ನು ಎತ್ತಿ ಹೇಳಲಾಯಿತು.

ವಿಜಯವಾಡದ ಪ್ರದೇಶಿಕ ಕಚೇರಿಯ ಹೆಚ್ಚುವರಿ ನಿರ್ದೇಶಕ ಎಂಒಇಎಫ್ & ಸಸಿ, ಡಾ. ಮುರಳಿ ಕೃಷ್ಣ ಅವರು, ಭಾರತದ 11,098.81 ಕಿ.ಮೀ. ಕರಾವಳಿಯು ಮಾಲಿನ್ಯದಿಂದಾಗಿ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಹೇಳಿದ್ದಾರೆ. ವಾರ್ಷಿಕವಾಗಿ 11-12 ಮಿಲಿಯನ್ ಟನ್ ಪ್ಲಾಸ್ಟಿಕ್ ಬಿಡುಗಡೆಯಾಗುತ್ತದೆ ಮತ್ತು ಇದರಿಂದಾಗಿ ಸಮಸ್ಯೆಗೆ ಕಾರಣವಾಗಿದೆ. ಬಿಲಿಯನ್ ಜನರು ಸಾಗರಗಳ ಮೇಲೆ ಅವಲಂಬಿತವಾಗಿದ್ದಾರೆ ಮತ್ತು ಜಾಗತಿಕ ಪ್ರೋಟೀನ್ನ 20% ಮೀನುಗಳಿಂದ ಬರುತ್ತಿದೆ ಎಂಬ ಆರ್ಥಿಕ ಪರಿಣಾಮವನ್ನು ಅವರು ಹೇಳಿದರು. ಜೀವವೈವಿಧ್ಯತೆ ಮತು ಜೀವನೋಪಾಯಕ್ಕಾಗಿ ಹವಳದ ದಿಬ್ಬಗಳು ಮತ್ತು ಮ್ಯಾಂಗ್ರೋವ್ ಗಳ ಪ್ರಾಮುಖ್ಯತೆಯನ್ನು ಅವರು ಒತ್ತಿ ಹೇಳಿದರು.

ಕೇರಳ ಸರ್ಕಾರದ ಪರಿಸರ ಮತ್ತು ಹವಾಮಾನ ಬದಲಾವಣೆ ನಿರ್ದೇಶನಾಲಯದ ಪರಿಸರ ಎಂಜಿನಿಯರ್ ಮತ್ತು ಹೆಚ್ಚುವರಿ ಯೋಜನಾ ನಿರ್ದೇಶಕ ಡಾ. ಕಲೈಅರಸನ್, ಕರಾವಳಿ ವಲಯಗಳನ್ನು ರಕ್ಷಿಸುವಲ್ಲಿನ ಸವಾಲುಗಳ ಬಗ್ಗೆ ಮಾತನಾಡಿದರು.ವಿಶೇಷವಾಗಿ ಕೇರಳದಲ್ಲಿ, ಸವೆತ, ತ್ಯಾಜ್ಯ ನಿರ್ವಹಣಾ ಸಮಸ್ಯೆಗಳು ಮತ್ತು ಸವಾಲುಗಳಿಂದ ಬಳಲುತ್ತಿದೆ ಎಂದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

11 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

11 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

11 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

21 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago