Advertisement
ಸುದ್ದಿಗಳು

“ಹಸಿರು ಭವಿಷ್ಯ”ಕ್ಕಾಗಿ ಪರಿಸರ ಸಮ್ಮೇಳನ

Share

ದಕ್ಷಿಣ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು ಮತ್ತು ಸಮಿತಿಗಳ ಸಹೋಗದೊಂದಿಗೆ ಚೆನ್ನೈನ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ದಕ್ಷಿಣ ವಲಯ ಪೀಠವು ಆಯೋಜಿಸಿದ್ದ ಪರಿಸರದ ಕುರಿತಾದ ಪ್ರಾದೇಶಿಕ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಈ 2025 ಸಮ್ಮೇಳನವನ್ನು ಎನ್ಜಿಟಿ ಅಧ್ಯಕ್ಷರಾದ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಅವರ ನೇತೃತ್ವದಲ್ಲಿ, ಚೆನ್ನೈನ ದಕ್ಷಿಣ ವಲಯ ಪೀಠದ ಎನ್ಜಿಟಿ ನ್ಯಾಯಾಂಗ ಸದಸ್ಯರಾದ ನ್ಯಾಯಮೂರ್ತಿ ಪುಷ್ಪಾ ಸತ್ಯನಾರಾಯಣ ಅವರ ಮಾರ್ಗದರ್ಶನದಲ್ಲಿ ನಡೆಸಲಾಯಿತು.

ಕರ್ನಾಟಕದ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಅಧ್ಯಕ್ಷತೆಯಲ್ಲಿ ಕರಾವಳಿ ವಲಯಗಳನ್ನು ರಕ್ಷಿಸುವಲ್ಲಿನ ಸವಾಲುಗಳ ಕುರಿತು ನಡೆದ ಸಭೆಯಲ್ಲಿ, ಪ್ಲಾಸ್ಟಿಕ್ ಮಾಲಿನ್ಯ ಮತ್ತು ನಗರಾಭಿವೃದ್ಧಿಯಂತಹ ಮಾನವ ಚಟುವಟಿಕೆಗಳು ಸಮುದ್ರ ಜೀವಿಗಳು ಬೀರುವ ತೀವ್ರ ಪರಿಸರ ಪರಿಣಾಮವನ್ನು ಎತ್ತಿ ಹೇಳಲಾಯಿತು.

ವಿಜಯವಾಡದ ಪ್ರದೇಶಿಕ ಕಚೇರಿಯ ಹೆಚ್ಚುವರಿ ನಿರ್ದೇಶಕ ಎಂಒಇಎಫ್ & ಸಸಿ, ಡಾ. ಮುರಳಿ ಕೃಷ್ಣ ಅವರು, ಭಾರತದ 11,098.81 ಕಿ.ಮೀ. ಕರಾವಳಿಯು ಮಾಲಿನ್ಯದಿಂದಾಗಿ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಹೇಳಿದ್ದಾರೆ. ವಾರ್ಷಿಕವಾಗಿ 11-12 ಮಿಲಿಯನ್ ಟನ್ ಪ್ಲಾಸ್ಟಿಕ್ ಬಿಡುಗಡೆಯಾಗುತ್ತದೆ ಮತ್ತು ಇದರಿಂದಾಗಿ ಸಮಸ್ಯೆಗೆ ಕಾರಣವಾಗಿದೆ. ಬಿಲಿಯನ್ ಜನರು ಸಾಗರಗಳ ಮೇಲೆ ಅವಲಂಬಿತವಾಗಿದ್ದಾರೆ ಮತ್ತು ಜಾಗತಿಕ ಪ್ರೋಟೀನ್ನ 20% ಮೀನುಗಳಿಂದ ಬರುತ್ತಿದೆ ಎಂಬ ಆರ್ಥಿಕ ಪರಿಣಾಮವನ್ನು ಅವರು ಹೇಳಿದರು. ಜೀವವೈವಿಧ್ಯತೆ ಮತು ಜೀವನೋಪಾಯಕ್ಕಾಗಿ ಹವಳದ ದಿಬ್ಬಗಳು ಮತ್ತು ಮ್ಯಾಂಗ್ರೋವ್ ಗಳ ಪ್ರಾಮುಖ್ಯತೆಯನ್ನು ಅವರು ಒತ್ತಿ ಹೇಳಿದರು.

ಕೇರಳ ಸರ್ಕಾರದ ಪರಿಸರ ಮತ್ತು ಹವಾಮಾನ ಬದಲಾವಣೆ ನಿರ್ದೇಶನಾಲಯದ ಪರಿಸರ ಎಂಜಿನಿಯರ್ ಮತ್ತು ಹೆಚ್ಚುವರಿ ಯೋಜನಾ ನಿರ್ದೇಶಕ ಡಾ. ಕಲೈಅರಸನ್, ಕರಾವಳಿ ವಲಯಗಳನ್ನು ರಕ್ಷಿಸುವಲ್ಲಿನ ಸವಾಲುಗಳ ಬಗ್ಗೆ ಮಾತನಾಡಿದರು.ವಿಶೇಷವಾಗಿ ಕೇರಳದಲ್ಲಿ, ಸವೆತ, ತ್ಯಾಜ್ಯ ನಿರ್ವಹಣಾ ಸಮಸ್ಯೆಗಳು ಮತ್ತು ಸವಾಲುಗಳಿಂದ ಬಳಲುತ್ತಿದೆ ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

13 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

14 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

1 day ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago