2047 ಭಾರತಕ್ಕೆ ಸ್ವಾತಂತ್ರ್ಯ ದೊರಕಿ 100 ವರ್ಷ | ಮುಂದಿನ 25 ವರ್ಷಕ್ಕೆ ಈಗಲೇ ತಯಾರಿಯ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ

April 15, 2024
10:03 PM

ಒಂದು ದೇಶದ ಪ್ರಧಾನಿ(Prime Minister) ಹುದ್ದೆಗೇರುವವರಿಗೆ ದೇಶಧ ಮುಂದಿನ ಭವಿಷ್ಯದ ಬಗ್ಗೆ ದೂರಾಲೋಚನೆ ಇರಬೇಕು. ನಮ್ಮ ದೇಶದ ಪ್ರಧಾನಿ ಮೋದಿ(PM MOdi) ಕೂಡ ಇದೇ ಹಾದಿಯಲ್ಲಿ ಸಾಗುತ್ತಿದ್ದಾರೆ. 2047 ಗಮನದಲ್ಲಿಟ್ಟುಕೊಂಡು ಇನ್ನಷ್ಟು ಕೆಲಸ ಮಾಡುವುದು ಬಾಕಿ ಇದೆ. 2024 ಚುನಾವಣೆ ಬೇರೆ, 2047 ಬೇರೆ. 2047 ಭಾರತಕ್ಕೆ(India) ಸ್ವಾತಂತ್ರ್ಯ(Freedom) ಸಿಕ್ಕಿ 100 ವರ್ಷವಾಗಲಿದೆ. ಈ ಅವಧಿಗೆ ಮಾಡಬೇಕಾದ ಕೆಲಸಗಳ ಗುರಿ ಇರಬೇಕು ಎಂದು ಹೇಳುತ್ತಾ ಮುಂದಿನ 25 ವರ್ಷಕ್ಕೆ ತಯಾರಿಯ ಬಗ್ಗೆ ಪ್ರಧಾನಿ ಮೋದಿ (Narendra Modi) ಮಾತನಾಡಿದರು.

ಖಾಸಗಿ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೆಚ್ಚಿನ ಸರ್ಕಾರಗಳು ಎಲ್ಲವನ್ನು ಮಾಡಿದೆ ಎಂದುಕೊಳ್ಳುತ್ತವೆ. ಆದರೆ ನಾನು ಹಾಗೇ ಅಂದುಕೊಳ್ಳುವುದಿಲ್ಲ. ನಾನು ಮಾಡುವುದು ಇನ್ನು ಬಾಕಿ ಇದೆ. ಬಹಳಷ್ಟು ಕುಟುಂಬಗಳ ಕನಸು ನನಸು ಮಾಡಬೇಕಿದೆ. ನಾನು ಸಿಎಂ ಆಗಿದ್ದಾಗ ಚುನಾವಣೆಯಿಂದ ಸಮಸ್ಯೆಯಾಗುತ್ತಿತ್ತು. ಹಿರಿಯ ಅಧಿಕಾರಿಗಳು ಬೇರೆ ರಾಜ್ಯಗಳಿಗೂ ಚುನಾವಣಾ ಕರ್ತವ್ಯಕ್ಕೆ ಹೋಗುತ್ತಿದ್ದರು. ಇದರಿಂದ ನನ್ನ ಕೆಲಸಕ್ಕೆ ತೊಂದರೆಯಾಗುತ್ತಿತ್ತು. ಹೀಗಾಗಿ ನಾನು ಚುನಾವಣೆಗೂ ಮುನ್ನ ನೂರು ದಿನಗಳ ತಯಾರಿ ಮಾಡುತ್ತಿದ್ದೆ ಎಂದು ಹೇಳಿದರು. ಈಗ ಮುಂದಿನ 25 ವರ್ಷಕ್ಕೆ ನಾನು ತಯಾರಿ ಮಾಡಿಕೊಂಡಿದ್ದೇನೆ. ವಲಯವಾರು ವಿಶೇಷ ತಂಡಗಳನ್ನು ರಚಿಸಿದ್ದೇನೆ. ಜನರಿಂದ ಸಲಹೆ ಪಡೆದುಕೊಂಡಿದ್ದೇನೆ. 15-20 ಲಕ್ಷ ಜನರು ಸಲಹೆ ನೀಡಿದ್ದಾರೆ, ಇದನ್ನು ಡಾಕ್ಯುಮೆಂಟ್ ಮಾಡಿದ್ದೇನೆ. ಚುನಾವಣೆ ಬಳಿಕ ಕೆಲಸ ಶುರು ಮಾಡಲಿದ್ದೇನೆ. ಎಲ್ಲ ರಾಜ್ಯಗಳಲ್ಲಿ ಆಗಬೇಕಿರುವ ಕೆಲಸ ಮಾಡಬೇಕು. ಬಿಜೆಪಿ ಪ್ರಣಾಳಿಕೆ (BJP Manifesto), 25 ವರ್ಷದ ಮಿಷನ್. ಮುಂದಿನ ಐದು ವರ್ಷದ ಕೆಲಸಗಳನ್ನು ವಿಭಾಗಿಸುತ್ತೇನೆ ಎಂದರು.

ನಾನು ದೊಡ್ಡ ಯೋಜನೆಗಳನ್ನು ಹೊಂದಿದ್ದೇನೆ. ಯಾರಿಗೂ ಹೆದರುವ ಅಗತ್ಯ ಇಲ್ಲ. ಯಾರನ್ನೂ ಹೆದರಿಸಲು ಅಥವಾ ಯಾರನ್ನೂ ಕಡಿಮೆ ಮಾಡಲು ನಾನು ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಆ ನಿರ್ಧಾರಗಳು ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಮಾಡಲಾಗಿದೆ ಎಂದು ತಿಳಿಸಿದರು.

ಚುನಾವಣೆಯನ್ನು ಲಘುವಾಗಿ ಸ್ವೀಕರಿಸಬಾರದು. ಇದು ಪ್ರಜಾಪ್ರಭುತ್ವ ಉತ್ಸವ. ಚುನಾವಣೆಯಲ್ಲಿ ನಾನು ಮಾತ್ರ ಅಲ್ಲ ಪ್ರತಿಯೊಬ್ಬ ಮತದಾರ, ಬೂತ್ ಕಾರ್ಯಕರ್ತ, ಅಭ್ಯರ್ಥಿಯೂ ಮುಖ್ಯ. ಒಬ್ಬರು ಇಲ್ಲದಿದ್ದರೂ ಚುನಾವಣೆ ನಡೆಯಲ್ಲ ಎಂದು ಮೋದಿ ಹೇಳಿದರು. ಕಳೆದ ಬಾರಿ ಅಧಿಕಾರ ಬಂದ ನೂರು ದಿನದಲ್ಲಿ 370 ರದ್ದು ಮಾಡಿತು. ತ್ರಿವಳಿ ತಲಾಕ್ ರದ್ದು ಮಾಡಲಾಯಿತು. ಬ್ಯಾಂಕ್ ಗಳ ಮರ್ಜ್ ಮಾಡಲಾಯಿತು. ಒಂದು ರಾಷ್ಟ್ರ ಒಂದು ಚುನಾವಣೆ ನಮ್ಮ ಬದ್ಧತೆ. ದೇಶದಲ್ಲಿ ಇದರ ಪರವಾಗಿ ಅನೇಕ ಜನರು ಮುಂದೆ ಬಂದಿದ್ದಾರೆ. ಅನೇಕ ಜನರು ತಮ್ಮ ಸಲಹೆಗಳನ್ನು ಸಮಿತಿಗೆ ನೀಡಿದ್ದಾರೆ. ಈ ವರದಿಯನ್ನು ಕಾರ್ಯಗತಗೊಳಿಸಲು ಸಮರ್ಥರಾದರೆ ದೇಶಕ್ಕೆ ಸಾಕಷ್ಟು ಪ್ರಯೋಜನವಾಗಲಿದೆ ಎಂದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror