22ನೇ ಶೃಂಗಸಭೆ : ರಷ್ಯಾದಲ್ಲಿ ಮೋದಿಗೆ ಅದ್ಧೂರಿ ಸ್ವಾಗತ : ಪುಟಿನ್‌ ಜೊತೆ ಮೋದಿ ಮಾತುಕತೆ : ಸೇನೆಯಲ್ಲಿದ್ದ ಭಾರತೀಯರ ಬಿಡುಗಡೆಗೆ ರಷ್ಯಾ ಅಸ್ತು

July 9, 2024
11:44 AM

3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ (Narendra Modi) ರಷ್ಯಾಗೆ (Russia) ಭೇಟಿ ನೀಡಿದ್ದಾರೆ. 22ನೇ ಭಾರತ-ರಷ್ಯಾ ಶೃಂಗಸಭೆಯ (22nd India-Russia Summit) ಹಿನ್ನೆಲೆ ರಷ್ಯಾಗೆ ಬಂದಿಳಿದ ಮೋದಿ ಅವರಿಗೆ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ದೊರೆಯಿತು. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರ ಅಧಿಕೃತ ನಿವಾಸದಲ್ಲಿ ‘ಖಾಸಗಿ ಔತಣಕೂಟ’ದ ಸಂದರ್ಭದಲ್ಲಿ, ಭಾರತದ ಜನರಿಗೆ ಸೇವೆ ಸಲ್ಲಿಸುವುದು ತಮ್ಮ ಏಕೈಕ ಗುರಿ ಎಂದು ಹೇಳಿದ್ದಾರೆ.

ನೀವು ನಿಮ್ಮ ಇಡೀ ಜೀವನವನ್ನು ಭಾರತೀಯ ಜನರ ಸೇವೆಗೆ ಮುಡಿಪಾಗಿಟ್ಟಿದ್ದೀರಿ. ಜನರು ಅದನ್ನು ಅನುಭವಿಸುತ್ತಾರೆ ಎಂದು ರಷ್ಯಾದ ಅಧ್ಯಕ್ಷರು ಪ್ರಧಾನಿಗೆ ತಿಳಿಸಿದ್ದರು. ಇದಕ್ಕೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿ, ನೀವು ಹೇಳಿದ್ದು ಸರಿ. ನನಗೆ ಒಂದೇ ಗುರಿ ಇದೆ. ನನ್ನ ದೇಶ, ಭಾರತದ ಜನರು ಎಂದು ಆಶಯ ವ್ಯಕ್ತಪಡಿಸಿದ್ದಾರೆ.  ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಅಧ್ಯಕ್ಷ ವ್ಲಾಡಿಮಿರ್ ಪುಟಿನ್  ಅವರೊಂದಿಗೆ ತಮ್ಮ ದೇಶದ ಸೇನೆಯಲ್ಲಿ ಕೆಲಸ ಮಾಡುವ ಎಲ್ಲಾ ಭಾರತೀಯರನ್ನು ಬಿಡುಗಡೆ ಮಾಡುವಂತೆ ಚರ್ಚಿಸಿದ್ದಾರೆ. ಚರ್ಚೆಯ ಬಳಿಕ ಸೇನೆಯಲ್ಲಿರುವ ಭಾರತೀಯರ ಬಿಡುಗಡೆಗೆ ರಷ್ಯಾ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಎರಡು ದಿನಗಳ ಪ್ರವಾಸಕ್ಕಾಗಿ ರಷ್ಯಾಕ್ಕೆ ತೆರಳಿರುವ ಮೋದಿ, ಸೋಮವಾರ ಸಂಜೆ ಪುಟಿನ್ ಆಯೋಜಿಸಿದ್ದ ಔತಣಕೂಟದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ತಮ್ಮ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಭಾರತೀಯರನ್ನು ಬಿಡುಗಡೆ ಮಾಡಲು ಮತ್ತು ಅವರನ್ನು ಭಾರತಕ್ಕೆ ಕಳಿಸಲು ಅನುಕೂಲ ಮಾಡಿಕೊಡಬೇಕು ಎಂದು ಅವರು ಹೇಳಿದ್ದಾರೆ. ಮೋದಿಯವರ ಈ ಬೇಡಿಕೆಗೆ ಪುಟಿನ್ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇದಕ್ಕೂ ಮೊದಲು, ಪ್ರಧಾನಿ ಮೋದಿ ಅವರನ್ನು ರಷ್ಯಾ ಅಧ್ಯಕ್ಷ ಪುಟಿನ್ ಅವರು, ಖಾಸಗಿ ಔತಣಕೂಟಕ್ಕಾಗಿ ನೊವೊ-ಒಗರಿಯೋವೊದಲ್ಲಿನ ತಮ್ಮ ಅಧಿಕೃತ ನಿವಾಸದಲ್ಲಿ ಸ್ವಾಗತಿಸಿದರು. ಈ ವೇಳೆ ಪುಟಿನ್, ಗೌರವಾನ್ವಿತ ಪ್ರಧಾನ ಮಂತ್ರಿ! ಆತ್ಮೀಯ ಸ್ನೇಹಿತ! ಮತ್ತೊಮ್ಮೆ ಶುಭ ಮಧ್ಯಾಹ್ನ, ನಿಮ್ಮನ್ನು ನೋಡಲು ನನಗೆ ತುಂಬಾ ಸಂತೋಷವಾಗಿದೆ. ನಾವು ನಾಳೆ ಅಧಿಕೃತ ಸಂಭಾಷಣೆಗಳನ್ನು ನಡೆಸುತ್ತೇವೆ. ಆದರೆ ಇಂದು ಈ ಮನೆಯ ವಾತಾವರಣದಲ್ಲಿ ನಾವು ಬಹುಶಃ ಶಾಂತವಾಗಿ ಮಾತನಾಡಬಹುದು ಎಂದು ಮೋದಿಗೆ ತಿಳಿಸಿದ್ದಾರೆ.

ಮೂರನೇ ಅವಧಿಗೆ ಪ್ರಧಾನಿಯಾದ ಮೋದಿ ಅವರನ್ನು ಪುಟಿನ್‌ ಅಭಿನಂದಿಸಿದ್ದಾರೆ. ನೀವು ಪ್ರಧಾನಿಯಾಗಿ ಮತ್ತೆ ಆಯ್ಕೆಯಾಗಿರುವುದಕ್ಕೆ ಮೊದಲು ನಿಮ್ಮನ್ನು ಅಭಿನಂದಿಸುತ್ತೇನೆ. ಇದು ಆಕಸ್ಮಿಕವಲ್ಲ ಎಂದು ನಾನು ಭಾವಿಸುತ್ತೇನೆ. ನೀವು ತುಂಬಾ ಶಕ್ತಿಯುತ ವ್ಯಕ್ತಿಯಾಗಿದ್ದೀರಿ. ಭಾರತ ಮತ್ತು ಭಾರತೀಯ ಜನರ ಹಿತಾಸಕ್ತಿಗಳಲ್ಲಿ ಫಲಿತಾಂಶಗಳನ್ನು ಸಾಧಿಸುವುದು ಹೇಗೆ ಎಂದು ನಿಮಗೆ ತಿಳಿದಿದೆ. ಭಾರತವು ಆರ್ಥಿಕತೆಯ ವಿಷಯದಲ್ಲಿ ವಿಶ್ವದಲ್ಲಿ ಮೂರನೇ ಸ್ಥಾನದಲ್ಲಿದೆ. ಬಹುಶಃ ಈಗ ಇದು ಜನಸಂಖ್ಯೆಯ ದೃಷ್ಟಿಯಿಂದ ವಿಶ್ವದ ಅತಿದೊಡ್ಡ ದೇಶವಾಗಿದೆ ಎಂದು ಬಣ್ಣಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಮನೆಯಲ್ಲಿ ಸ್ನೇಹಿತನನ್ನು ಭೇಟಿಯಾಗುವುದು ತುಂಬಾ ಸಂತೋಷವಾಗಿದೆ. ನೀವು ನನ್ನನ್ನು ನಿಮ್ಮ ಮನೆಗೆ ಆಹ್ವಾನಿಸಿದ್ದೀರಿ. ಅಂತಹ ಆಸಕ್ತಿದಾಯಕ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕೆ ನಾನು ನಿಮಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ
June 14, 2026
3:27 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ
June 14, 2026
12:52 PM
by: ದ ರೂರಲ್ ಮಿರರ್.ಕಾಂ
ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು
June 14, 2026
6:54 AM
by: ದ ರೂರಲ್ ಮಿರರ್.ಕಾಂ
2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?
June 13, 2026
9:19 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror