Weather Mirror | ಮುಂದಿನ 24 ಗಂಟೆಗಳ ಹವಾಮಾನ ವರದಿ ಹೀಗಿದೆ

November 1, 2020
12:48 PM

2.11.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ತಲಕಾವೇರಿ, ಮಡಿಕೇರಿ, ಸೋಮವಾರಪೇಟೆ, ಶನಿವಾರಸಂತೆ, ಚಿಕ್ಕಮಗಳೂರು, ಹೊರನಾಡು, ಆಗುಂಬೆ, ಶೃಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಶಿವಮೊಗ್ಗ ಹಾಗೂ ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಆದರೂ ಸುಳ್ಯ, ಸುಬ್ರಮಣ್ಯ ಹಾಗೂ ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.

ಈಗಿನ ಪ್ರಕಾರ ಸಧ್ಯಕ್ಕೆ ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಾದ್ಯಂತ ಸ್ವಾತಿ ಮಳೆ ಸಾಧ್ಯತೆ ಕಡಿಮೆಯಾದಂತೆ ತೋರುತ್ತಿದೆ.

ಅರಬ್ಬಿ ಸಮುದ್ರದಲ್ಲಿ ಯಮನ್ ಕರಾವಳಿ ಬಳಿ ಉಂಟಾದ ವಾಯುಭಾರ ಕುಸಿತದ ಪರಿಣಾಮವೋ ಏನೋ ಪ. ಬಂಗಾಳ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತ ನಿರೀಕ್ಷಿತ ಪ್ರಮಾಣದಲ್ಲಿ ಪರಿಣಾಮ ಬೀರುತ್ತಿಲ್ಲ. ಹಾಗಾಗಿ ಕರ್ನಾಟಕದಲ್ಲಿ ಹಾಗೂ ಕೇರಳ ಕರಾವಳಿ ಭಾಗಗಳಲ್ಲಿ ಈ ಮುಂದೆ ಕೊಟ್ಟಂತಹ ಮುನ್ಸೂಚನೆಯ ಪ್ರಮಾಣದಲ್ಲಿ ಮಳೆ ಆಗುತ್ತಿಲ್ಲ.
ಹಿಂಗಾರು ಮಳೆಯೂ ದುರ್ಬಲವಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror