ಇಂದು ನೂತನ ಸಚಿವರ ಪದಗ್ರಹಣ, 24 ಶಾಸಕರಿಗೆ ‘ಮಂತ್ರಿಭಾಗ್ಯ’

May 27, 2023
11:40 AM

 ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ  ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಸಿಎಂ ಆಯ್ಕೆಯಲ್ಲಿ ಎಚ್ಚರಿಕೆ ಹೆಜ್ಜೆಯನ್ನು ಇಟ್ಟಿತ್ತು. ಡಿಕೆ ಶಿವಕುಮಾರ್ ಮನವೊಲಿಕೆ ಮಾಡಿ ಸಿದ್ದರಾಮಯ್ಯ ಅವರನ್ನೇ ಸಿಎಂ ಮಾಡಲು ಯಶಸ್ವಿಯಾಗಿದ್ದ ಕೈ ಹೈಕಮಾಂಡ್​ಗೆ ಸಚಿವ ಸ್ಥಾನ ಹಂಚಿಕೆ ಕೂಡ ತಲೆನೋವು ತಂದಿತ್ತು. ಈ ನಡುವೆ ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆಗೆ ಡೆ​ಲ್ಲಿ ದೊರೆಗಳ ಜೊತೆ ಕುರ್ಚಿ ಹಂಚಿಕೆ ಮಾಡಿದ್ದಾರೆ. ನಿನ್ನೆ ತಡರಾತ್ರಿ ನೂತನ ಸಚಿವ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಎಲ್ಲಾ ಸಮುದಾಯ, ಪ್ರದೇಶಗಳಿಗೆ ಪ್ರಾತಿನಿಧ್ಯ ನೀಡಿ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಿದೆ. ಇದರ ನಡುವೆ ಇಂದು ಬೆಳಗ್ಗೆ 11:30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನೂತನ ಸಚಿವ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

Advertisement

ಯಾರಿಗೆಲ್ಲಾ ಸಚಿವ ಸ್ಥಾನ ಸಿಕ್ಕಿದೆ?

ಭೈರತಿ ಸುರೇಶ್, ಕೆ.ವೆಂಕಟೇಶ್, ಕೃಷ್ಣ ಬೈರೇಗೌಡ, ಡಾ.ಎಚ್.ಸಿ ಮಹದೇವಪ್ಪ, ಶಿವರಾಜ ತಂಗಡಗಿ, ನಾಗೇಂದ್ರ,  ಕೆ.ಎನ್. ರಾಜಣ್ಣ, ಮಂಕಾಳ ವೈದ್ಯ, ಎಂ.ಬಿ ಪಾಟೀಲ್, ಜಮೀರ್ ಅಹ್ಮದ್ ಖಾನ್, ಕೆ.ಜೆ ಜಾರ್ಜ್, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ಚಲುವರಾಯಸ್ವಾಮಿ, ಡಾ.ಎಂ.ಸಿ ಸುಧಾಕರ್.

ಪಿ.ನರೇಂದ್ರಸ್ವಾಮಿ, ಎಚ್.ಕೆ. ಪಾಟೀಲ್, ಮಧು ಬಂಗಾರಪ್ಪ, ಡಿ.ಸುಧಾಕರ್, ಭೋಸರಾಜು, ಈಶ್ವರ್‌ ಖಂಡ್ರೆ, ಎಸ್.ಎಸ್. ಮಲ್ಲಿಕಾರ್ಜುನ್, ಶರಣಬಸಪ್ಪ ದರ್ಶನಾಪುರ, ರಹೀಂ ಖಾನ್, ಶರಣ ಪ್ರಕಾಶ್ ಪಾಟೀಲ್, ಡಾ.ಜಿ ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಕೆ.ಹೆಚ್ ಮುನಿಯಪ್ಪ, ರಾಮಲಿಂಗಾರೆಡ್ಡಿ ಅವರಿಗೆ ಮಂತ್ರಿ ಸ್ಥಾನ ದೊರೆತಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

6,100 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಚಾಲನೆ | ದೇಶದಲ್ಲಿ ಅಭಿವೃದ್ಧಿ ಪರಿಕಲ್ಪನೆಗೆ ಹೊಸ ವೇಗ
October 21, 2024
7:26 PM
by: ದ ರೂರಲ್ ಮಿರರ್.ಕಾಂ
ನಕಲಿ ದಾಖಲೆ ಕೊಟ್ಟು ಪಡಿತರ ಚೀಟಿ ಮಾಡಿಸಿದರೆ ಜೋಕೆ : ರಾಜ್ಯದಲ್ಲಿ ಬರೋಬ್ಬರಿ 12 ಲಕ್ಷ ರೇಷನ್ ಕಾರ್ಡ್ ರದ್ದು : ಕಾರಣ ಏನು..?
August 2, 2024
2:13 PM
by: The Rural Mirror ಸುದ್ದಿಜಾಲ
ಕೊಟ್ಟಿಗೆಯಲಿ ತುಂಬಿ ತುಳುಕುವ ಹಸು ಕರುಗಳು : ವೃದ್ಧಾಪ್ಯದಲ್ಲೂ ಮಲೆನಾಡು ಗಿಡ್ಡ ತಳಿ ಹಸು ಸಾಕುತ್ತಿರುವ ಅಜ್ಜಿ : ಬತ್ತದ ಜೀವನ ಉತ್ಸಾಹ
May 5, 2024
8:45 PM
by: The Rural Mirror ಸುದ್ದಿಜಾಲ
ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಳಗೊಂಡ ರಬ್ಬರ್‌ ಬಳಕೆ | ಬೆಳೆಗಾರರಿಗೆ ಧಾರಣೆ ಏರಿಕೆಯ ನಿರೀಕ್ಷೆ |
March 25, 2024
11:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group