ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಸಿಎಂ ಆಯ್ಕೆಯಲ್ಲಿ ಎಚ್ಚರಿಕೆ ಹೆಜ್ಜೆಯನ್ನು ಇಟ್ಟಿತ್ತು. ಡಿಕೆ ಶಿವಕುಮಾರ್ ಮನವೊಲಿಕೆ ಮಾಡಿ ಸಿದ್ದರಾಮಯ್ಯ ಅವರನ್ನೇ ಸಿಎಂ ಮಾಡಲು ಯಶಸ್ವಿಯಾಗಿದ್ದ ಕೈ ಹೈಕಮಾಂಡ್ಗೆ ಸಚಿವ ಸ್ಥಾನ ಹಂಚಿಕೆ ಕೂಡ ತಲೆನೋವು ತಂದಿತ್ತು. ಈ ನಡುವೆ ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆಗೆ ಡೆಲ್ಲಿ ದೊರೆಗಳ ಜೊತೆ ಕುರ್ಚಿ ಹಂಚಿಕೆ ಮಾಡಿದ್ದಾರೆ. ನಿನ್ನೆ ತಡರಾತ್ರಿ ನೂತನ ಸಚಿವ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಎಲ್ಲಾ ಸಮುದಾಯ, ಪ್ರದೇಶಗಳಿಗೆ ಪ್ರಾತಿನಿಧ್ಯ ನೀಡಿ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಿದೆ. ಇದರ ನಡುವೆ ಇಂದು ಬೆಳಗ್ಗೆ 11:30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನೂತನ ಸಚಿವ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.
ಯಾರಿಗೆಲ್ಲಾ ಸಚಿವ ಸ್ಥಾನ ಸಿಕ್ಕಿದೆ?
ಭೈರತಿ ಸುರೇಶ್, ಕೆ.ವೆಂಕಟೇಶ್, ಕೃಷ್ಣ ಬೈರೇಗೌಡ, ಡಾ.ಎಚ್.ಸಿ ಮಹದೇವಪ್ಪ, ಶಿವರಾಜ ತಂಗಡಗಿ, ನಾಗೇಂದ್ರ, ಕೆ.ಎನ್. ರಾಜಣ್ಣ, ಮಂಕಾಳ ವೈದ್ಯ, ಎಂ.ಬಿ ಪಾಟೀಲ್, ಜಮೀರ್ ಅಹ್ಮದ್ ಖಾನ್, ಕೆ.ಜೆ ಜಾರ್ಜ್, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ಚಲುವರಾಯಸ್ವಾಮಿ, ಡಾ.ಎಂ.ಸಿ ಸುಧಾಕರ್.
ಪಿ.ನರೇಂದ್ರಸ್ವಾಮಿ, ಎಚ್.ಕೆ. ಪಾಟೀಲ್, ಮಧು ಬಂಗಾರಪ್ಪ, ಡಿ.ಸುಧಾಕರ್, ಭೋಸರಾಜು, ಈಶ್ವರ್ ಖಂಡ್ರೆ, ಎಸ್.ಎಸ್. ಮಲ್ಲಿಕಾರ್ಜುನ್, ಶರಣಬಸಪ್ಪ ದರ್ಶನಾಪುರ, ರಹೀಂ ಖಾನ್, ಶರಣ ಪ್ರಕಾಶ್ ಪಾಟೀಲ್, ಡಾ.ಜಿ ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಕೆ.ಹೆಚ್ ಮುನಿಯಪ್ಪ, ರಾಮಲಿಂಗಾರೆಡ್ಡಿ ಅವರಿಗೆ ಮಂತ್ರಿ ಸ್ಥಾನ ದೊರೆತಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…