ಹಾಸನದಲ್ಲಿ ನಡೆಯುತ್ತಿರುವ ಹಾಸನಾಂಬ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಸಾರ್ವಜನಿಕ ದರ್ಶನದ ಅಂತಿಮ ದಿನ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿ ದೇವರ ದರ್ಶನ ಪಡೆದರು.
1200 ವರ್ಷಗಳ ಇತಿಹಾಸ ಹೊಂದಿರುವ ಹಾಸನಾಂಬ ದೇವಾಲಯಕ್ಕೆ ರಾಜ್ಯ ಹೊರ ರಾಜ್ಯಗಳಿಂದ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದು, ಈ ಬಾರಿ ಇಂದಿಗೆ 25 ಲಕ್ಷ ಮೀರಿ ಭಕ್ತರು ದೇವರ ದರ್ಶನ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಹಕಾರದಿಂದ ಶಾಂತಿಯುತವಾಗಿ ದೇವರ ದರ್ಶನ ನಡೆದಿದ್ದು, ಹುಂಡಿ ಹಣ ಹೊರತುಪಡಿಸಿ ಈಗಾಗಲೇ 20 ಕೋಟಿ ಆದಾಯ ದೇವಾಲಯಕ್ಕೆ ಬಂದಿದೆ ಅದನ್ನು ದೇವಾಲಯದ ಖಾತೆಯಲ್ಲಿ ಇರಿಸಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದರು. ಹಾಸನಾಂಬೆಯ ದರ್ಶನ ಪಡೆದ ನಂತರ ಅವರು, ಟಿಕೆಟ್ ಹಾಗೂ ಪ್ರಸಾದ ಮಾರಾಟದಿಂದ 25 ಕೋಟಿ ರೂಪಾಯಿ ಸಂಗ್ರಹವಾಗಿದೆ. ಈ ಹಣ ದೇವಸ್ಥಾನದ ಖಾತೆಯಲ್ಲೇ ಇರುತ್ತದೆ ಎಂದು ಅವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…