ಹಾಸನದಲ್ಲಿ ನಡೆಯುತ್ತಿರುವ ಹಾಸನಾಂಬ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಸಾರ್ವಜನಿಕ ದರ್ಶನದ ಅಂತಿಮ ದಿನ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿ ದೇವರ ದರ್ಶನ ಪಡೆದರು.
1200 ವರ್ಷಗಳ ಇತಿಹಾಸ ಹೊಂದಿರುವ ಹಾಸನಾಂಬ ದೇವಾಲಯಕ್ಕೆ ರಾಜ್ಯ ಹೊರ ರಾಜ್ಯಗಳಿಂದ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದು, ಈ ಬಾರಿ ಇಂದಿಗೆ 25 ಲಕ್ಷ ಮೀರಿ ಭಕ್ತರು ದೇವರ ದರ್ಶನ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಹಕಾರದಿಂದ ಶಾಂತಿಯುತವಾಗಿ ದೇವರ ದರ್ಶನ ನಡೆದಿದ್ದು, ಹುಂಡಿ ಹಣ ಹೊರತುಪಡಿಸಿ ಈಗಾಗಲೇ 20 ಕೋಟಿ ಆದಾಯ ದೇವಾಲಯಕ್ಕೆ ಬಂದಿದೆ ಅದನ್ನು ದೇವಾಲಯದ ಖಾತೆಯಲ್ಲಿ ಇರಿಸಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದರು. ಹಾಸನಾಂಬೆಯ ದರ್ಶನ ಪಡೆದ ನಂತರ ಅವರು, ಟಿಕೆಟ್ ಹಾಗೂ ಪ್ರಸಾದ ಮಾರಾಟದಿಂದ 25 ಕೋಟಿ ರೂಪಾಯಿ ಸಂಗ್ರಹವಾಗಿದೆ. ಈ ಹಣ ದೇವಸ್ಥಾನದ ಖಾತೆಯಲ್ಲೇ ಇರುತ್ತದೆ ಎಂದು ಅವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…