ಹಾಸನದಲ್ಲಿ ನಡೆಯುತ್ತಿರುವ ಹಾಸನಾಂಬ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಸಾರ್ವಜನಿಕ ದರ್ಶನದ ಅಂತಿಮ ದಿನ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿ ದೇವರ ದರ್ಶನ ಪಡೆದರು.
1200 ವರ್ಷಗಳ ಇತಿಹಾಸ ಹೊಂದಿರುವ ಹಾಸನಾಂಬ ದೇವಾಲಯಕ್ಕೆ ರಾಜ್ಯ ಹೊರ ರಾಜ್ಯಗಳಿಂದ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದು, ಈ ಬಾರಿ ಇಂದಿಗೆ 25 ಲಕ್ಷ ಮೀರಿ ಭಕ್ತರು ದೇವರ ದರ್ಶನ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಹಕಾರದಿಂದ ಶಾಂತಿಯುತವಾಗಿ ದೇವರ ದರ್ಶನ ನಡೆದಿದ್ದು, ಹುಂಡಿ ಹಣ ಹೊರತುಪಡಿಸಿ ಈಗಾಗಲೇ 20 ಕೋಟಿ ಆದಾಯ ದೇವಾಲಯಕ್ಕೆ ಬಂದಿದೆ ಅದನ್ನು ದೇವಾಲಯದ ಖಾತೆಯಲ್ಲಿ ಇರಿಸಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದರು. ಹಾಸನಾಂಬೆಯ ದರ್ಶನ ಪಡೆದ ನಂತರ ಅವರು, ಟಿಕೆಟ್ ಹಾಗೂ ಪ್ರಸಾದ ಮಾರಾಟದಿಂದ 25 ಕೋಟಿ ರೂಪಾಯಿ ಸಂಗ್ರಹವಾಗಿದೆ. ಈ ಹಣ ದೇವಸ್ಥಾನದ ಖಾತೆಯಲ್ಲೇ ಇರುತ್ತದೆ ಎಂದು ಅವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…