MIRROR FOCUS

ಅಯೊಧ್ಯೆ ಬಾಲ ರಾಮನ ದರ್ಶನ ಪಡೆದವರು ಬರೋಬ್ಬರಿ 25 ಲಕ್ಷ ಮಂದಿ | 11 ಕೋಟಿ ರೂ. ಕಾಣಿಕೆ ಸಂಗ್ರಹ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಯೋಧ್ಯೆಯಲ್ಲಿ(Ayodhya) ರಾಮ ಮಂದಿರ(Ram Mandir) ಮರುಸ್ಥಾಪನೆ ಕೋಟ್ಯಾಂತರ ಭಾರತೀಯರ ಕನಸು. ಆ ಕನಸು ಜನವರಿ 22ಕ್ಕೆ ನನಸುಗೊಂಡಿದೆ. ಮುಂದಿನ ಕನಸು ಜೀವನದಲ್ಲಿ ಒಮ್ಮೆಯಾದರು ಅಯೋಧ್ಯೆಗೆ ಭೇಟಿ ನೀಡಬೇಕು. ರಾಮನನ್ನು ಒಮ್ಮೆ ಕಣ್ತುಂಬಿಕೊಳ್ಳಬೇಕು ಅನ್ನೋದು. ರಾಮಲಲ್ಲಾನ(Ramlalla) ಪ್ರಾಣ ಪ್ರತಿಷ್ಠೆಯಾದ ಬಳಿಕ ಕಳೆದ 11 ದಿನಗಳಲ್ಲಿ ಸುಮಾರು 25 ಲಕ್ಷ ಭಕ್ತರು(devotees) ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇದರಿಂದ ಸುಮಾರು 11 ಕೋಟಿ ರೂ. ಕಾಣಿಕೆ(donation) ಸಂಗ್ರಹವಾಗಿದೆ ಎಂದು ದೇವಾಲಯದ ಟ್ರಸ್ಟ್‌ನ ಕಚೇರಿ ಪ್ರಭಾರಿ ಪ್ರಕಾಶ್ ಗುಪ್ತಾ ತಿಳಿಸಿದ್ದಾರೆ.

Advertisement
ಕಳೆದ 11 ದಿನಗಳಲ್ಲಿ ಸುಮಾರು 8 ಕೋಟಿ ರೂ.ಗಳನ್ನು ಕಾಣಿಕೆ ಪೆಟ್ಟಿಗೆಗಳಲ್ಲಿ ಭಕ್ತರು ಹಾಕಿದ್ದಾರೆ. ಚೆಕ್ ಮತ್ತು ಆನ್‍ಲೈನ್ ಮೂಲಕ ಪಡೆದ ಮೊತ್ತ ಸುಮಾರು 3.50 ಕೋಟಿ ರೂ. ಆಗಿದೆ. ದೇಗುಲದ ಗರ್ಭಗುಡಿಯಲ್ಲಿ ದರ್ಶನ ಪಥದ ಬಳಿ ನಾಲ್ಕು ದೊಡ್ಡ ಕಾಣಿಕೆ ಪೆಟ್ಟಿಗೆಗಳನ್ನು ಇಡಲಾಗಿದ್ದು, ಅದರಲ್ಲಿ ಭಕ್ತರು ದೇಣಿಗೆಯನ್ನು ನೀಡುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಇದರೊಂದಿಗೆ 10 ಗಣಕೀಕೃತ ಕೌಂಟರ್‌ಗಳಲ್ಲಿ ಜನರು ದೇಣಿಗೆ ನೀಡುತ್ತಾರೆ. ದೇಣಿಗೆ ಕೌಂಟರ್‌ನಲ್ಲಿ ದೇವಸ್ಥಾನದ ಟ್ರಸ್ಟ್ ನೌಕರರನ್ನು ನೇಮಿಸಲಾಗಿದೆ. ಸಂಜೆ ಕೌಂಟರ್ ಮುಚ್ಚಿದ ನಂತರ ಟ್ರಸ್ಟ್ ಕಚೇರಿಯಲ್ಲಿ ಸ್ವೀಕರಿಸಿದ ಕಾಣಿಕೆ ಮೊತ್ತದ ಲೆಕ್ಕವನ್ನು ಸಲ್ಲಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ. 11 ಬ್ಯಾಂಕ್ ಉದ್ಯೋಗಿಗಳು ಮತ್ತು ದೇವಸ್ಥಾನದ ಟ್ರಸ್ಟ್‌ನ ಮೂವರನ್ನು ಒಳಗೊಂಡ 14 ಜನರ ತಂಡವು ನಾಲ್ಕು ಕಾಣಿಕೆ ಪೆಟ್ಟಿಗೆಗಳಲ್ಲಿ ಕಾಣಿಕೆಗಳನ್ನು ಎಣಿಸುತ್ತದೆ. ದೇಣಿಗೆ ಮೊತ್ತವನ್ನು ಠೇವಣಿ ಇಡುವುದರಿಂದ ಹಿಡಿದು ಎಣಿಸುವವರೆಗೆ ಎಲ್ಲವನ್ನೂ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿ ಮಾಡಲಾಗುತ್ತದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಜನವರಿ 22 ರಂದು ರಾಮಮಂದಿರದಲ್ಲಿ ಬಾಲಕ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೆರವೇರಿತ್ತು. ಈ ಕಾರ್ಯಕ್ರಮಕ್ಕೆ ದೇಶವಿದೇಶಗಳಿಂದ ಸುಮಾರು 7000 ಕ್ಕೂ ಅಧಿಕ ಗಣ್ಯರಿಗೆ ಆಹ್ವಾನ ನೀಡಲಾಗಿತ್ತು.

  • ಅಂತರ್ಜಾಲ ಮಾಹಿತಿ
About 25 lakh devotees have visited the temple in the last 11 days after the death of Ramlalla. 11 crores from this. Prakash Gupta, office manager of the temple trust said that the donation has been collected.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳಗಾವಿಯಲ್ಲಿ 3 ದಿನಗಳ ಮಾವು, ಜೇನು ಮೇಳ | ರೈತರಿಂದ ಪ್ರದರ್ಶನ, ಗ್ರಾಹಕರಿಗೆ ನೇರ ಮಾರಾಟ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆಯಿಂದ ಬೆಳಗಾವಿಯ ಹೋಮ್ ಪಾರ್ಕ್ ನಲ್ಲಿ…

3 hours ago

ದೇಶಾದ್ಯಂತ 47 ಸ್ಥಳಗಳಲ್ಲಿ ಉದ್ಯೋಗ ಮೇಳ | 51000 ನವ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಣೆ

ದೇಶಾದ್ಯಂತ ಒಂದೇ ದಿನ 47 ಸ್ಥಳಗಳಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು ಬೆಂಗಳೂರಿನ ಎನ್‌ಎಸಿಐಎ…

3 hours ago

ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |

ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

11 hours ago

ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…

15 hours ago

ಹೊಸರುಚಿ | ಹಲಸಿನ ಕಾಯಿ ಪೂರಿ

ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…

17 hours ago

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

1 day ago