Advertisement
MIRROR FOCUS

ಅಯೊಧ್ಯೆ ಬಾಲ ರಾಮನ ದರ್ಶನ ಪಡೆದವರು ಬರೋಬ್ಬರಿ 25 ಲಕ್ಷ ಮಂದಿ | 11 ಕೋಟಿ ರೂ. ಕಾಣಿಕೆ ಸಂಗ್ರಹ

Share

ಅಯೋಧ್ಯೆಯಲ್ಲಿ(Ayodhya) ರಾಮ ಮಂದಿರ(Ram Mandir) ಮರುಸ್ಥಾಪನೆ ಕೋಟ್ಯಾಂತರ ಭಾರತೀಯರ ಕನಸು. ಆ ಕನಸು ಜನವರಿ 22ಕ್ಕೆ ನನಸುಗೊಂಡಿದೆ. ಮುಂದಿನ ಕನಸು ಜೀವನದಲ್ಲಿ ಒಮ್ಮೆಯಾದರು ಅಯೋಧ್ಯೆಗೆ ಭೇಟಿ ನೀಡಬೇಕು. ರಾಮನನ್ನು ಒಮ್ಮೆ ಕಣ್ತುಂಬಿಕೊಳ್ಳಬೇಕು ಅನ್ನೋದು. ರಾಮಲಲ್ಲಾನ(Ramlalla) ಪ್ರಾಣ ಪ್ರತಿಷ್ಠೆಯಾದ ಬಳಿಕ ಕಳೆದ 11 ದಿನಗಳಲ್ಲಿ ಸುಮಾರು 25 ಲಕ್ಷ ಭಕ್ತರು(devotees) ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇದರಿಂದ ಸುಮಾರು 11 ಕೋಟಿ ರೂ. ಕಾಣಿಕೆ(donation) ಸಂಗ್ರಹವಾಗಿದೆ ಎಂದು ದೇವಾಲಯದ ಟ್ರಸ್ಟ್‌ನ ಕಚೇರಿ ಪ್ರಭಾರಿ ಪ್ರಕಾಶ್ ಗುಪ್ತಾ ತಿಳಿಸಿದ್ದಾರೆ.

ಕಳೆದ 11 ದಿನಗಳಲ್ಲಿ ಸುಮಾರು 8 ಕೋಟಿ ರೂ.ಗಳನ್ನು ಕಾಣಿಕೆ ಪೆಟ್ಟಿಗೆಗಳಲ್ಲಿ ಭಕ್ತರು ಹಾಕಿದ್ದಾರೆ. ಚೆಕ್ ಮತ್ತು ಆನ್‍ಲೈನ್ ಮೂಲಕ ಪಡೆದ ಮೊತ್ತ ಸುಮಾರು 3.50 ಕೋಟಿ ರೂ. ಆಗಿದೆ. ದೇಗುಲದ ಗರ್ಭಗುಡಿಯಲ್ಲಿ ದರ್ಶನ ಪಥದ ಬಳಿ ನಾಲ್ಕು ದೊಡ್ಡ ಕಾಣಿಕೆ ಪೆಟ್ಟಿಗೆಗಳನ್ನು ಇಡಲಾಗಿದ್ದು, ಅದರಲ್ಲಿ ಭಕ್ತರು ದೇಣಿಗೆಯನ್ನು ನೀಡುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಇದರೊಂದಿಗೆ 10 ಗಣಕೀಕೃತ ಕೌಂಟರ್‌ಗಳಲ್ಲಿ ಜನರು ದೇಣಿಗೆ ನೀಡುತ್ತಾರೆ. ದೇಣಿಗೆ ಕೌಂಟರ್‌ನಲ್ಲಿ ದೇವಸ್ಥಾನದ ಟ್ರಸ್ಟ್ ನೌಕರರನ್ನು ನೇಮಿಸಲಾಗಿದೆ. ಸಂಜೆ ಕೌಂಟರ್ ಮುಚ್ಚಿದ ನಂತರ ಟ್ರಸ್ಟ್ ಕಚೇರಿಯಲ್ಲಿ ಸ್ವೀಕರಿಸಿದ ಕಾಣಿಕೆ ಮೊತ್ತದ ಲೆಕ್ಕವನ್ನು ಸಲ್ಲಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ. 11 ಬ್ಯಾಂಕ್ ಉದ್ಯೋಗಿಗಳು ಮತ್ತು ದೇವಸ್ಥಾನದ ಟ್ರಸ್ಟ್‌ನ ಮೂವರನ್ನು ಒಳಗೊಂಡ 14 ಜನರ ತಂಡವು ನಾಲ್ಕು ಕಾಣಿಕೆ ಪೆಟ್ಟಿಗೆಗಳಲ್ಲಿ ಕಾಣಿಕೆಗಳನ್ನು ಎಣಿಸುತ್ತದೆ. ದೇಣಿಗೆ ಮೊತ್ತವನ್ನು ಠೇವಣಿ ಇಡುವುದರಿಂದ ಹಿಡಿದು ಎಣಿಸುವವರೆಗೆ ಎಲ್ಲವನ್ನೂ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿ ಮಾಡಲಾಗುತ್ತದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಜನವರಿ 22 ರಂದು ರಾಮಮಂದಿರದಲ್ಲಿ ಬಾಲಕ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೆರವೇರಿತ್ತು. ಈ ಕಾರ್ಯಕ್ರಮಕ್ಕೆ ದೇಶವಿದೇಶಗಳಿಂದ ಸುಮಾರು 7000 ಕ್ಕೂ ಅಧಿಕ ಗಣ್ಯರಿಗೆ ಆಹ್ವಾನ ನೀಡಲಾಗಿತ್ತು.

  • ಅಂತರ್ಜಾಲ ಮಾಹಿತಿ
About 25 lakh devotees have visited the temple in the last 11 days after the death of Ramlalla. 11 crores from this. Prakash Gupta, office manager of the temple trust said that the donation has been collected.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

17 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago