ಪ್ರಮುಖ

#Congress | ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕಷ್ಟೆ ಒಗ್ಗಟ್ಟು, ಒಳಗೊಳಗೆ ಬಿಕ್ಕಟ್ಟು..? | ಸಚಿವರ ವಿರುದ್ಧ ಸಿಎಂಗೆ ಕಾಂಗ್ರೆಸ್ ನ 25 ಶಾಸಕರ ದೂರು.. |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ಕಾಂಗ್ರೆಸ್ #Congress ಸರ್ಕಾರ ಅಧಿಕಾರಕ್ಕೆ ಬಂದು 2 ತಿಂಗಳು ಕಳೆದಿಯಷ್ಟೇ. ಈಗಾಗಲೇ ಶಾಸಕರ ಮದ್ಯೆ ವೈಮನಸ್ಸು ಉಂಟಾಗಿದೆ. ಇದರ ಜೊತೆಗೆ ವಿರೋಧ ಪಕ್ಷಗಳು ಸರ್ಕಾರ ಹೆಚ್ಚು ದಿನ ಉಳಿಯೋದಿಲ್ಲ ಎನ್ನುವ ಮಾತುಗಳನ್ನು ಆಡುತ್ತಿದ್ದಾರೆ. ಕರ್ನಾಟಕ  ಕಾಂಗ್ರೆಸ್‌ನಲ್ಲೀಗ ಬಿಕ್ಕಟ್ಟಿನ ಪರಿಸ್ಥಿತಿ ಎದುರಾಗಿದೆ. ಸಿದ್ದರಾಮಯ್ಯ ಬೆಂಬಲಿತ ಹಿರಿಯ ಶಾಸಕರಿಂದ ಪಕ್ಷದ ಸಚಿವರ ವಿರುದ್ಧವೇ ಸಿಎಂಗೆ ದೂರು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement
ಬಿ.ಕೆ. ಹರಿಪ್ರಸಾದ್ ಈಚೆಗೆ ಸಿಎಂ ಕೆಳಗಿಳಿಸೋದು ಗೊತ್ತು, ಆಯ್ಕೆ ಮಾಡೋದು ಗೊತ್ತು ಎಂದು ಹೇಳಿಕೆ ನೀಡಿದ್ದರು. ತಮಗೆ ಸಚಿವ ಸ್ಥಾನ ಸಿಗದಿದ್ದ ಬಗ್ಗೆ ಈ ರೀತಿ ಅಸಮಾಧಾನ ಹೊರಹಾಕಿದ್ದರೆ. ಇದರ ಬೆನ್ನಲ್ಲೇ ಪಕ್ಷದ ಸಚಿವರ ವಿರುದ್ಧ ಹಿರಿಯ ಶಾಸಕರು ಅಸಮಾಧಾನ ಹೊರಹಾಕಿ ಸಿಎಂ ಮುಂದೆ ಹೋಗಿದ್ದಾರೆ. ಸರ್ಕಾರ ರಚನೆಯಾದ 2 ತಿಂಗಳಲ್ಲೇ ಅಸಮಾಧಾನ ಸ್ಫೋಟಿಸಿದ್ದು, ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಶಾಸಕರು ಒತ್ತಾಯಿಸಿದ್ದಾರೆ. ಇದೇ ಜು.27ಕ್ಕೆ ಸಭೆ ಕರೆಯಲಾಗಿದೆ. ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದಕ್ಕೆ ಈ ಬೆಳವಣಿಗೆ ನಿದರ್ಶನದಂತೆ ತೋರುತ್ತಿದೆ.

ಈ ಬೆಳವಣಿಗೆ ‘ಕೈ’ ಪಾಳಯದಲ್ಲಿ ನಾನಾ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕಷ್ಟೆ ಒಗ್ಗಟ್ಟು, ಒಳಗೊಳಗೆ ಬಿಕ್ಕಟ್ಟು ಎಂಬ ಪರಿಸ್ಥಿತಿ ಇದೆಯಾ? ಮನೆಯೊಂದು ಮೂರು ಬಾಗಿಲು ಎಂಬಂತಾಯ್ತಾ ಕಾಂಗ್ರೆಸ್ ಸ್ಥಿತಿ? ಸಿದ್ದರಾಮಯ್ಯ ವರ್ಸಸ್ ಅದರ್ಸ್ ಫೈಟ್ ಸಹ ಪಕ್ಷ ಹಾಗೂ ಸರ್ಕಾರದ ಮಟ್ಟದಲ್ಲಿ ಒಳಗೊಳಗೆ ಕೆಲಸ ಶುರು ಮಾಡಿದೆಯಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಇದು ಸಚಿವ ಸ್ಥಾನ ವಂಚಿತ ಮಾಜಿ ಸಚಿವರು ಹಾಗೂ ಹಿರಿಯ ಶಾಸಕರ ಅಸಮಾಧಾನ ಎನ್ನಲಾಗುತ್ತಿದೆ. ಸಚಿವ ಸ್ಥಾನವೂ ಸಿಗಲಿಲ್ಲಾ. ಅತ್ತ ಹಿರಿತನಕ್ಕೆ ಗೌರವವೂ ಸಿಗುತ್ತಿಲ್ಲಾ. ಸಚಿವರಾಗಬೇಕಿದ್ದವರು ಅದನ್ನು ಕಳೆದುಕೊಂಡಿದ್ದೇವೆ. ಸಚಿವರಾದವರು ನಮ್ಮ ಹಿರಿತನಕ್ಕೆ ಗೌರವ ಕೊಡುತ್ತಿಲ್ಲಾ. ನಾವೇ ಆಗಬೇಕಿದ್ದ ಸಚಿವ ಸ್ಥಾನ ಇವರಿಗೆ ಸಿಕ್ಕಿದೆ. ನಮಗೆ ಗೌರವ ಸಿಗುತ್ತಿಲ್ಲಾ ಎನ್ನುವುದು ಅವರ ಅಸಮಾಧಾನ ಎಂದು ಮೂಲಗಳು ತಿಳಿಸಿವೆ. ನಮ್ಮ ಸ್ಥಾನದಲ್ಲಿ ಅವರು, ಅವರ ಸ್ಥಾನದಲ್ಲಿ ನಾವು. ನಮ್ಮ ಹಿರಿತನಕ್ಕೆ ಗೌರವ ಇಲ್ಲ. ಇದು ಸಚಿವ ಸ್ಥಾನ ವಂಚಿತ ಹಿರಿಯ ಶಾಸಕ ಹಾಗೂ ಮಾಜಿ ಸಚಿವರ ಅಸಮಾಧಾನದ ಮೂಲಗಳು ಮಾಹಿತಿ ನೀಡಿವೆ.

(Source :Online Network )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

5 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

5 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

5 hours ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

5 hours ago

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತ | 15,000 ಬೆಂಬಲ ಬೆಲೆ ಘೋಷಿಸುವಂತೆ ಬೆಳೆಗಾರರ ಆಗ್ರಹ

ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ…

6 hours ago