ಪ್ರಮುಖ

#Congress | ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕಷ್ಟೆ ಒಗ್ಗಟ್ಟು, ಒಳಗೊಳಗೆ ಬಿಕ್ಕಟ್ಟು..? | ಸಚಿವರ ವಿರುದ್ಧ ಸಿಎಂಗೆ ಕಾಂಗ್ರೆಸ್ ನ 25 ಶಾಸಕರ ದೂರು.. |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ಕಾಂಗ್ರೆಸ್ #Congress ಸರ್ಕಾರ ಅಧಿಕಾರಕ್ಕೆ ಬಂದು 2 ತಿಂಗಳು ಕಳೆದಿಯಷ್ಟೇ. ಈಗಾಗಲೇ ಶಾಸಕರ ಮದ್ಯೆ ವೈಮನಸ್ಸು ಉಂಟಾಗಿದೆ. ಇದರ ಜೊತೆಗೆ ವಿರೋಧ ಪಕ್ಷಗಳು ಸರ್ಕಾರ ಹೆಚ್ಚು ದಿನ ಉಳಿಯೋದಿಲ್ಲ ಎನ್ನುವ ಮಾತುಗಳನ್ನು ಆಡುತ್ತಿದ್ದಾರೆ. ಕರ್ನಾಟಕ  ಕಾಂಗ್ರೆಸ್‌ನಲ್ಲೀಗ ಬಿಕ್ಕಟ್ಟಿನ ಪರಿಸ್ಥಿತಿ ಎದುರಾಗಿದೆ. ಸಿದ್ದರಾಮಯ್ಯ ಬೆಂಬಲಿತ ಹಿರಿಯ ಶಾಸಕರಿಂದ ಪಕ್ಷದ ಸಚಿವರ ವಿರುದ್ಧವೇ ಸಿಎಂಗೆ ದೂರು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement
ಬಿ.ಕೆ. ಹರಿಪ್ರಸಾದ್ ಈಚೆಗೆ ಸಿಎಂ ಕೆಳಗಿಳಿಸೋದು ಗೊತ್ತು, ಆಯ್ಕೆ ಮಾಡೋದು ಗೊತ್ತು ಎಂದು ಹೇಳಿಕೆ ನೀಡಿದ್ದರು. ತಮಗೆ ಸಚಿವ ಸ್ಥಾನ ಸಿಗದಿದ್ದ ಬಗ್ಗೆ ಈ ರೀತಿ ಅಸಮಾಧಾನ ಹೊರಹಾಕಿದ್ದರೆ. ಇದರ ಬೆನ್ನಲ್ಲೇ ಪಕ್ಷದ ಸಚಿವರ ವಿರುದ್ಧ ಹಿರಿಯ ಶಾಸಕರು ಅಸಮಾಧಾನ ಹೊರಹಾಕಿ ಸಿಎಂ ಮುಂದೆ ಹೋಗಿದ್ದಾರೆ. ಸರ್ಕಾರ ರಚನೆಯಾದ 2 ತಿಂಗಳಲ್ಲೇ ಅಸಮಾಧಾನ ಸ್ಫೋಟಿಸಿದ್ದು, ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಶಾಸಕರು ಒತ್ತಾಯಿಸಿದ್ದಾರೆ. ಇದೇ ಜು.27ಕ್ಕೆ ಸಭೆ ಕರೆಯಲಾಗಿದೆ. ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದಕ್ಕೆ ಈ ಬೆಳವಣಿಗೆ ನಿದರ್ಶನದಂತೆ ತೋರುತ್ತಿದೆ.

ಈ ಬೆಳವಣಿಗೆ ‘ಕೈ’ ಪಾಳಯದಲ್ಲಿ ನಾನಾ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕಷ್ಟೆ ಒಗ್ಗಟ್ಟು, ಒಳಗೊಳಗೆ ಬಿಕ್ಕಟ್ಟು ಎಂಬ ಪರಿಸ್ಥಿತಿ ಇದೆಯಾ? ಮನೆಯೊಂದು ಮೂರು ಬಾಗಿಲು ಎಂಬಂತಾಯ್ತಾ ಕಾಂಗ್ರೆಸ್ ಸ್ಥಿತಿ? ಸಿದ್ದರಾಮಯ್ಯ ವರ್ಸಸ್ ಅದರ್ಸ್ ಫೈಟ್ ಸಹ ಪಕ್ಷ ಹಾಗೂ ಸರ್ಕಾರದ ಮಟ್ಟದಲ್ಲಿ ಒಳಗೊಳಗೆ ಕೆಲಸ ಶುರು ಮಾಡಿದೆಯಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಇದು ಸಚಿವ ಸ್ಥಾನ ವಂಚಿತ ಮಾಜಿ ಸಚಿವರು ಹಾಗೂ ಹಿರಿಯ ಶಾಸಕರ ಅಸಮಾಧಾನ ಎನ್ನಲಾಗುತ್ತಿದೆ. ಸಚಿವ ಸ್ಥಾನವೂ ಸಿಗಲಿಲ್ಲಾ. ಅತ್ತ ಹಿರಿತನಕ್ಕೆ ಗೌರವವೂ ಸಿಗುತ್ತಿಲ್ಲಾ. ಸಚಿವರಾಗಬೇಕಿದ್ದವರು ಅದನ್ನು ಕಳೆದುಕೊಂಡಿದ್ದೇವೆ. ಸಚಿವರಾದವರು ನಮ್ಮ ಹಿರಿತನಕ್ಕೆ ಗೌರವ ಕೊಡುತ್ತಿಲ್ಲಾ. ನಾವೇ ಆಗಬೇಕಿದ್ದ ಸಚಿವ ಸ್ಥಾನ ಇವರಿಗೆ ಸಿಕ್ಕಿದೆ. ನಮಗೆ ಗೌರವ ಸಿಗುತ್ತಿಲ್ಲಾ ಎನ್ನುವುದು ಅವರ ಅಸಮಾಧಾನ ಎಂದು ಮೂಲಗಳು ತಿಳಿಸಿವೆ. ನಮ್ಮ ಸ್ಥಾನದಲ್ಲಿ ಅವರು, ಅವರ ಸ್ಥಾನದಲ್ಲಿ ನಾವು. ನಮ್ಮ ಹಿರಿತನಕ್ಕೆ ಗೌರವ ಇಲ್ಲ. ಇದು ಸಚಿವ ಸ್ಥಾನ ವಂಚಿತ ಹಿರಿಯ ಶಾಸಕ ಹಾಗೂ ಮಾಜಿ ಸಚಿವರ ಅಸಮಾಧಾನದ ಮೂಲಗಳು ಮಾಹಿತಿ ನೀಡಿವೆ.

(Source :Online Network )

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಪ್ಪಾಯಿ ಬೆಳೆ ಕಲಿಸಿದ ಕೃಷಿ ಪಾಠ | ಕೃಷಿ ಬದುಕಿಗೊಂದು ಸ್ಫೂರ್ತಿಯ ಮಾತು |

ಕೃಷಿ ಸವಾಲು, ಕೃಷಿ ಕಷ್ಟ, ಕೃಷಿ ಇನ್ನು ಸಾಧ್ಯವೇ ಇಲ್ಲ ಎನ್ನುವ ನೆಗೆಟಿವ್‌…

4 hours ago

7.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಚಾರ್ ಧಾಮ್ ಹೇಮಕುಂಡ್ ಯಾತ್ರೆಗೆ ನೋಂದಾವಣೆ

7.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಆಧಾರ್ ದೃಢೀಕರಣವನ್ನು ಬಳಸಿಕೊಂಡು ಚಾರ್ ಧಾಮ್ ಮತ್ತು…

5 hours ago

ಹೇಮಾವತಿ ನದಿ ನೀರಿಗೆ ವಿಷ ಸೇರ್ಪಡೆ : ಮೀನುಗಳ ಸಾವು

ಚಿಕ್ಕಮಗಳೂರು  ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿ ನೀರಿಗೆ…

5 hours ago

ಬೇಸಿಗೆ ರಜೆ ಹಿನ್ನೆಲೆ | ಮುಂಬೈನಿಂದ ಬೆಂಗಳೂರಿಗೆ ವಿಶೇಷ ರೈಲು ಸೇವೆ

ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಗಮನದಲ್ಲಿಟ್ಟುಕೊಂಡು ಮಧ್ಯ ರೈಲ್ವೆಯು ಛತ್ರಪತಿ ಶಿವಾಜಿ…

6 hours ago

ರಾಜ್ಯದಲ್ಲಿ ಕುಡಿಯುವ ನೀರಿನ  ಅಭಾವ ನೀಗಿಸಲು ಸರ್ಕಾರದಿಂದ ಸಮಿತಿ ರಚನೆ

ಬೇಸಿಗೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ  ಅಭಾವ ನೀಗಿಸಲು ಪ್ರಮುಖ ಜಲಾಶಯಗಳ ನಿರ್ವಹಣೆ ಹಾಗೂ…

6 hours ago

ಒಂದು ವರ್ಷದ ನಂತರ 8 ರಾಶಿಗಳಿಗೆ ಆರ್ಥಿಕ ಬಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

6 hours ago