Advertisement
ಪ್ರಮುಖ

#Congress | ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕಷ್ಟೆ ಒಗ್ಗಟ್ಟು, ಒಳಗೊಳಗೆ ಬಿಕ್ಕಟ್ಟು..? | ಸಚಿವರ ವಿರುದ್ಧ ಸಿಎಂಗೆ ಕಾಂಗ್ರೆಸ್ ನ 25 ಶಾಸಕರ ದೂರು.. |

Share

ರಾಜ್ಯದಲ್ಲಿ ಕಾಂಗ್ರೆಸ್ #Congress ಸರ್ಕಾರ ಅಧಿಕಾರಕ್ಕೆ ಬಂದು 2 ತಿಂಗಳು ಕಳೆದಿಯಷ್ಟೇ. ಈಗಾಗಲೇ ಶಾಸಕರ ಮದ್ಯೆ ವೈಮನಸ್ಸು ಉಂಟಾಗಿದೆ. ಇದರ ಜೊತೆಗೆ ವಿರೋಧ ಪಕ್ಷಗಳು ಸರ್ಕಾರ ಹೆಚ್ಚು ದಿನ ಉಳಿಯೋದಿಲ್ಲ ಎನ್ನುವ ಮಾತುಗಳನ್ನು ಆಡುತ್ತಿದ್ದಾರೆ. ಕರ್ನಾಟಕ  ಕಾಂಗ್ರೆಸ್‌ನಲ್ಲೀಗ ಬಿಕ್ಕಟ್ಟಿನ ಪರಿಸ್ಥಿತಿ ಎದುರಾಗಿದೆ. ಸಿದ್ದರಾಮಯ್ಯ ಬೆಂಬಲಿತ ಹಿರಿಯ ಶಾಸಕರಿಂದ ಪಕ್ಷದ ಸಚಿವರ ವಿರುದ್ಧವೇ ಸಿಎಂಗೆ ದೂರು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬಿ.ಕೆ. ಹರಿಪ್ರಸಾದ್ ಈಚೆಗೆ ಸಿಎಂ ಕೆಳಗಿಳಿಸೋದು ಗೊತ್ತು, ಆಯ್ಕೆ ಮಾಡೋದು ಗೊತ್ತು ಎಂದು ಹೇಳಿಕೆ ನೀಡಿದ್ದರು. ತಮಗೆ ಸಚಿವ ಸ್ಥಾನ ಸಿಗದಿದ್ದ ಬಗ್ಗೆ ಈ ರೀತಿ ಅಸಮಾಧಾನ ಹೊರಹಾಕಿದ್ದರೆ. ಇದರ ಬೆನ್ನಲ್ಲೇ ಪಕ್ಷದ ಸಚಿವರ ವಿರುದ್ಧ ಹಿರಿಯ ಶಾಸಕರು ಅಸಮಾಧಾನ ಹೊರಹಾಕಿ ಸಿಎಂ ಮುಂದೆ ಹೋಗಿದ್ದಾರೆ. ಸರ್ಕಾರ ರಚನೆಯಾದ 2 ತಿಂಗಳಲ್ಲೇ ಅಸಮಾಧಾನ ಸ್ಫೋಟಿಸಿದ್ದು, ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಶಾಸಕರು ಒತ್ತಾಯಿಸಿದ್ದಾರೆ. ಇದೇ ಜು.27ಕ್ಕೆ ಸಭೆ ಕರೆಯಲಾಗಿದೆ. ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದಕ್ಕೆ ಈ ಬೆಳವಣಿಗೆ ನಿದರ್ಶನದಂತೆ ತೋರುತ್ತಿದೆ.

ಈ ಬೆಳವಣಿಗೆ ‘ಕೈ’ ಪಾಳಯದಲ್ಲಿ ನಾನಾ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕಷ್ಟೆ ಒಗ್ಗಟ್ಟು, ಒಳಗೊಳಗೆ ಬಿಕ್ಕಟ್ಟು ಎಂಬ ಪರಿಸ್ಥಿತಿ ಇದೆಯಾ? ಮನೆಯೊಂದು ಮೂರು ಬಾಗಿಲು ಎಂಬಂತಾಯ್ತಾ ಕಾಂಗ್ರೆಸ್ ಸ್ಥಿತಿ? ಸಿದ್ದರಾಮಯ್ಯ ವರ್ಸಸ್ ಅದರ್ಸ್ ಫೈಟ್ ಸಹ ಪಕ್ಷ ಹಾಗೂ ಸರ್ಕಾರದ ಮಟ್ಟದಲ್ಲಿ ಒಳಗೊಳಗೆ ಕೆಲಸ ಶುರು ಮಾಡಿದೆಯಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಇದು ಸಚಿವ ಸ್ಥಾನ ವಂಚಿತ ಮಾಜಿ ಸಚಿವರು ಹಾಗೂ ಹಿರಿಯ ಶಾಸಕರ ಅಸಮಾಧಾನ ಎನ್ನಲಾಗುತ್ತಿದೆ. ಸಚಿವ ಸ್ಥಾನವೂ ಸಿಗಲಿಲ್ಲಾ. ಅತ್ತ ಹಿರಿತನಕ್ಕೆ ಗೌರವವೂ ಸಿಗುತ್ತಿಲ್ಲಾ. ಸಚಿವರಾಗಬೇಕಿದ್ದವರು ಅದನ್ನು ಕಳೆದುಕೊಂಡಿದ್ದೇವೆ. ಸಚಿವರಾದವರು ನಮ್ಮ ಹಿರಿತನಕ್ಕೆ ಗೌರವ ಕೊಡುತ್ತಿಲ್ಲಾ. ನಾವೇ ಆಗಬೇಕಿದ್ದ ಸಚಿವ ಸ್ಥಾನ ಇವರಿಗೆ ಸಿಕ್ಕಿದೆ. ನಮಗೆ ಗೌರವ ಸಿಗುತ್ತಿಲ್ಲಾ ಎನ್ನುವುದು ಅವರ ಅಸಮಾಧಾನ ಎಂದು ಮೂಲಗಳು ತಿಳಿಸಿವೆ. ನಮ್ಮ ಸ್ಥಾನದಲ್ಲಿ ಅವರು, ಅವರ ಸ್ಥಾನದಲ್ಲಿ ನಾವು. ನಮ್ಮ ಹಿರಿತನಕ್ಕೆ ಗೌರವ ಇಲ್ಲ. ಇದು ಸಚಿವ ಸ್ಥಾನ ವಂಚಿತ ಹಿರಿಯ ಶಾಸಕ ಹಾಗೂ ಮಾಜಿ ಸಚಿವರ ಅಸಮಾಧಾನದ ಮೂಲಗಳು ಮಾಹಿತಿ ನೀಡಿವೆ.

(Source :Online Network )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

10 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

10 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago