Advertisement
ಪ್ರಮುಖ

#Congress | ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕಷ್ಟೆ ಒಗ್ಗಟ್ಟು, ಒಳಗೊಳಗೆ ಬಿಕ್ಕಟ್ಟು..? | ಸಚಿವರ ವಿರುದ್ಧ ಸಿಎಂಗೆ ಕಾಂಗ್ರೆಸ್ ನ 25 ಶಾಸಕರ ದೂರು.. |

Share

ರಾಜ್ಯದಲ್ಲಿ ಕಾಂಗ್ರೆಸ್ #Congress ಸರ್ಕಾರ ಅಧಿಕಾರಕ್ಕೆ ಬಂದು 2 ತಿಂಗಳು ಕಳೆದಿಯಷ್ಟೇ. ಈಗಾಗಲೇ ಶಾಸಕರ ಮದ್ಯೆ ವೈಮನಸ್ಸು ಉಂಟಾಗಿದೆ. ಇದರ ಜೊತೆಗೆ ವಿರೋಧ ಪಕ್ಷಗಳು ಸರ್ಕಾರ ಹೆಚ್ಚು ದಿನ ಉಳಿಯೋದಿಲ್ಲ ಎನ್ನುವ ಮಾತುಗಳನ್ನು ಆಡುತ್ತಿದ್ದಾರೆ. ಕರ್ನಾಟಕ  ಕಾಂಗ್ರೆಸ್‌ನಲ್ಲೀಗ ಬಿಕ್ಕಟ್ಟಿನ ಪರಿಸ್ಥಿತಿ ಎದುರಾಗಿದೆ. ಸಿದ್ದರಾಮಯ್ಯ ಬೆಂಬಲಿತ ಹಿರಿಯ ಶಾಸಕರಿಂದ ಪಕ್ಷದ ಸಚಿವರ ವಿರುದ್ಧವೇ ಸಿಎಂಗೆ ದೂರು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬಿ.ಕೆ. ಹರಿಪ್ರಸಾದ್ ಈಚೆಗೆ ಸಿಎಂ ಕೆಳಗಿಳಿಸೋದು ಗೊತ್ತು, ಆಯ್ಕೆ ಮಾಡೋದು ಗೊತ್ತು ಎಂದು ಹೇಳಿಕೆ ನೀಡಿದ್ದರು. ತಮಗೆ ಸಚಿವ ಸ್ಥಾನ ಸಿಗದಿದ್ದ ಬಗ್ಗೆ ಈ ರೀತಿ ಅಸಮಾಧಾನ ಹೊರಹಾಕಿದ್ದರೆ. ಇದರ ಬೆನ್ನಲ್ಲೇ ಪಕ್ಷದ ಸಚಿವರ ವಿರುದ್ಧ ಹಿರಿಯ ಶಾಸಕರು ಅಸಮಾಧಾನ ಹೊರಹಾಕಿ ಸಿಎಂ ಮುಂದೆ ಹೋಗಿದ್ದಾರೆ. ಸರ್ಕಾರ ರಚನೆಯಾದ 2 ತಿಂಗಳಲ್ಲೇ ಅಸಮಾಧಾನ ಸ್ಫೋಟಿಸಿದ್ದು, ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಶಾಸಕರು ಒತ್ತಾಯಿಸಿದ್ದಾರೆ. ಇದೇ ಜು.27ಕ್ಕೆ ಸಭೆ ಕರೆಯಲಾಗಿದೆ. ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದಕ್ಕೆ ಈ ಬೆಳವಣಿಗೆ ನಿದರ್ಶನದಂತೆ ತೋರುತ್ತಿದೆ.

ಈ ಬೆಳವಣಿಗೆ ‘ಕೈ’ ಪಾಳಯದಲ್ಲಿ ನಾನಾ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕಷ್ಟೆ ಒಗ್ಗಟ್ಟು, ಒಳಗೊಳಗೆ ಬಿಕ್ಕಟ್ಟು ಎಂಬ ಪರಿಸ್ಥಿತಿ ಇದೆಯಾ? ಮನೆಯೊಂದು ಮೂರು ಬಾಗಿಲು ಎಂಬಂತಾಯ್ತಾ ಕಾಂಗ್ರೆಸ್ ಸ್ಥಿತಿ? ಸಿದ್ದರಾಮಯ್ಯ ವರ್ಸಸ್ ಅದರ್ಸ್ ಫೈಟ್ ಸಹ ಪಕ್ಷ ಹಾಗೂ ಸರ್ಕಾರದ ಮಟ್ಟದಲ್ಲಿ ಒಳಗೊಳಗೆ ಕೆಲಸ ಶುರು ಮಾಡಿದೆಯಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಇದು ಸಚಿವ ಸ್ಥಾನ ವಂಚಿತ ಮಾಜಿ ಸಚಿವರು ಹಾಗೂ ಹಿರಿಯ ಶಾಸಕರ ಅಸಮಾಧಾನ ಎನ್ನಲಾಗುತ್ತಿದೆ. ಸಚಿವ ಸ್ಥಾನವೂ ಸಿಗಲಿಲ್ಲಾ. ಅತ್ತ ಹಿರಿತನಕ್ಕೆ ಗೌರವವೂ ಸಿಗುತ್ತಿಲ್ಲಾ. ಸಚಿವರಾಗಬೇಕಿದ್ದವರು ಅದನ್ನು ಕಳೆದುಕೊಂಡಿದ್ದೇವೆ. ಸಚಿವರಾದವರು ನಮ್ಮ ಹಿರಿತನಕ್ಕೆ ಗೌರವ ಕೊಡುತ್ತಿಲ್ಲಾ. ನಾವೇ ಆಗಬೇಕಿದ್ದ ಸಚಿವ ಸ್ಥಾನ ಇವರಿಗೆ ಸಿಕ್ಕಿದೆ. ನಮಗೆ ಗೌರವ ಸಿಗುತ್ತಿಲ್ಲಾ ಎನ್ನುವುದು ಅವರ ಅಸಮಾಧಾನ ಎಂದು ಮೂಲಗಳು ತಿಳಿಸಿವೆ. ನಮ್ಮ ಸ್ಥಾನದಲ್ಲಿ ಅವರು, ಅವರ ಸ್ಥಾನದಲ್ಲಿ ನಾವು. ನಮ್ಮ ಹಿರಿತನಕ್ಕೆ ಗೌರವ ಇಲ್ಲ. ಇದು ಸಚಿವ ಸ್ಥಾನ ವಂಚಿತ ಹಿರಿಯ ಶಾಸಕ ಹಾಗೂ ಮಾಜಿ ಸಚಿವರ ಅಸಮಾಧಾನದ ಮೂಲಗಳು ಮಾಹಿತಿ ನೀಡಿವೆ.

(Source :Online Network )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

8 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

20 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

21 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

1 day ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

2 days ago