Advertisement
ಪ್ರಮುಖ

#Congress | ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕಷ್ಟೆ ಒಗ್ಗಟ್ಟು, ಒಳಗೊಳಗೆ ಬಿಕ್ಕಟ್ಟು..? | ಸಚಿವರ ವಿರುದ್ಧ ಸಿಎಂಗೆ ಕಾಂಗ್ರೆಸ್ ನ 25 ಶಾಸಕರ ದೂರು.. |

Share

ರಾಜ್ಯದಲ್ಲಿ ಕಾಂಗ್ರೆಸ್ #Congress ಸರ್ಕಾರ ಅಧಿಕಾರಕ್ಕೆ ಬಂದು 2 ತಿಂಗಳು ಕಳೆದಿಯಷ್ಟೇ. ಈಗಾಗಲೇ ಶಾಸಕರ ಮದ್ಯೆ ವೈಮನಸ್ಸು ಉಂಟಾಗಿದೆ. ಇದರ ಜೊತೆಗೆ ವಿರೋಧ ಪಕ್ಷಗಳು ಸರ್ಕಾರ ಹೆಚ್ಚು ದಿನ ಉಳಿಯೋದಿಲ್ಲ ಎನ್ನುವ ಮಾತುಗಳನ್ನು ಆಡುತ್ತಿದ್ದಾರೆ. ಕರ್ನಾಟಕ  ಕಾಂಗ್ರೆಸ್‌ನಲ್ಲೀಗ ಬಿಕ್ಕಟ್ಟಿನ ಪರಿಸ್ಥಿತಿ ಎದುರಾಗಿದೆ. ಸಿದ್ದರಾಮಯ್ಯ ಬೆಂಬಲಿತ ಹಿರಿಯ ಶಾಸಕರಿಂದ ಪಕ್ಷದ ಸಚಿವರ ವಿರುದ್ಧವೇ ಸಿಎಂಗೆ ದೂರು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬಿ.ಕೆ. ಹರಿಪ್ರಸಾದ್ ಈಚೆಗೆ ಸಿಎಂ ಕೆಳಗಿಳಿಸೋದು ಗೊತ್ತು, ಆಯ್ಕೆ ಮಾಡೋದು ಗೊತ್ತು ಎಂದು ಹೇಳಿಕೆ ನೀಡಿದ್ದರು. ತಮಗೆ ಸಚಿವ ಸ್ಥಾನ ಸಿಗದಿದ್ದ ಬಗ್ಗೆ ಈ ರೀತಿ ಅಸಮಾಧಾನ ಹೊರಹಾಕಿದ್ದರೆ. ಇದರ ಬೆನ್ನಲ್ಲೇ ಪಕ್ಷದ ಸಚಿವರ ವಿರುದ್ಧ ಹಿರಿಯ ಶಾಸಕರು ಅಸಮಾಧಾನ ಹೊರಹಾಕಿ ಸಿಎಂ ಮುಂದೆ ಹೋಗಿದ್ದಾರೆ. ಸರ್ಕಾರ ರಚನೆಯಾದ 2 ತಿಂಗಳಲ್ಲೇ ಅಸಮಾಧಾನ ಸ್ಫೋಟಿಸಿದ್ದು, ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಶಾಸಕರು ಒತ್ತಾಯಿಸಿದ್ದಾರೆ. ಇದೇ ಜು.27ಕ್ಕೆ ಸಭೆ ಕರೆಯಲಾಗಿದೆ. ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದಕ್ಕೆ ಈ ಬೆಳವಣಿಗೆ ನಿದರ್ಶನದಂತೆ ತೋರುತ್ತಿದೆ.

ಈ ಬೆಳವಣಿಗೆ ‘ಕೈ’ ಪಾಳಯದಲ್ಲಿ ನಾನಾ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕಷ್ಟೆ ಒಗ್ಗಟ್ಟು, ಒಳಗೊಳಗೆ ಬಿಕ್ಕಟ್ಟು ಎಂಬ ಪರಿಸ್ಥಿತಿ ಇದೆಯಾ? ಮನೆಯೊಂದು ಮೂರು ಬಾಗಿಲು ಎಂಬಂತಾಯ್ತಾ ಕಾಂಗ್ರೆಸ್ ಸ್ಥಿತಿ? ಸಿದ್ದರಾಮಯ್ಯ ವರ್ಸಸ್ ಅದರ್ಸ್ ಫೈಟ್ ಸಹ ಪಕ್ಷ ಹಾಗೂ ಸರ್ಕಾರದ ಮಟ್ಟದಲ್ಲಿ ಒಳಗೊಳಗೆ ಕೆಲಸ ಶುರು ಮಾಡಿದೆಯಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಇದು ಸಚಿವ ಸ್ಥಾನ ವಂಚಿತ ಮಾಜಿ ಸಚಿವರು ಹಾಗೂ ಹಿರಿಯ ಶಾಸಕರ ಅಸಮಾಧಾನ ಎನ್ನಲಾಗುತ್ತಿದೆ. ಸಚಿವ ಸ್ಥಾನವೂ ಸಿಗಲಿಲ್ಲಾ. ಅತ್ತ ಹಿರಿತನಕ್ಕೆ ಗೌರವವೂ ಸಿಗುತ್ತಿಲ್ಲಾ. ಸಚಿವರಾಗಬೇಕಿದ್ದವರು ಅದನ್ನು ಕಳೆದುಕೊಂಡಿದ್ದೇವೆ. ಸಚಿವರಾದವರು ನಮ್ಮ ಹಿರಿತನಕ್ಕೆ ಗೌರವ ಕೊಡುತ್ತಿಲ್ಲಾ. ನಾವೇ ಆಗಬೇಕಿದ್ದ ಸಚಿವ ಸ್ಥಾನ ಇವರಿಗೆ ಸಿಕ್ಕಿದೆ. ನಮಗೆ ಗೌರವ ಸಿಗುತ್ತಿಲ್ಲಾ ಎನ್ನುವುದು ಅವರ ಅಸಮಾಧಾನ ಎಂದು ಮೂಲಗಳು ತಿಳಿಸಿವೆ. ನಮ್ಮ ಸ್ಥಾನದಲ್ಲಿ ಅವರು, ಅವರ ಸ್ಥಾನದಲ್ಲಿ ನಾವು. ನಮ್ಮ ಹಿರಿತನಕ್ಕೆ ಗೌರವ ಇಲ್ಲ. ಇದು ಸಚಿವ ಸ್ಥಾನ ವಂಚಿತ ಹಿರಿಯ ಶಾಸಕ ಹಾಗೂ ಮಾಜಿ ಸಚಿವರ ಅಸಮಾಧಾನದ ಮೂಲಗಳು ಮಾಹಿತಿ ನೀಡಿವೆ.

(Source :Online Network )

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

2 days ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago