Advertisement
ಪ್ರಮುಖ

#Congress | ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕಷ್ಟೆ ಒಗ್ಗಟ್ಟು, ಒಳಗೊಳಗೆ ಬಿಕ್ಕಟ್ಟು..? | ಸಚಿವರ ವಿರುದ್ಧ ಸಿಎಂಗೆ ಕಾಂಗ್ರೆಸ್ ನ 25 ಶಾಸಕರ ದೂರು.. |

Share

ರಾಜ್ಯದಲ್ಲಿ ಕಾಂಗ್ರೆಸ್ #Congress ಸರ್ಕಾರ ಅಧಿಕಾರಕ್ಕೆ ಬಂದು 2 ತಿಂಗಳು ಕಳೆದಿಯಷ್ಟೇ. ಈಗಾಗಲೇ ಶಾಸಕರ ಮದ್ಯೆ ವೈಮನಸ್ಸು ಉಂಟಾಗಿದೆ. ಇದರ ಜೊತೆಗೆ ವಿರೋಧ ಪಕ್ಷಗಳು ಸರ್ಕಾರ ಹೆಚ್ಚು ದಿನ ಉಳಿಯೋದಿಲ್ಲ ಎನ್ನುವ ಮಾತುಗಳನ್ನು ಆಡುತ್ತಿದ್ದಾರೆ. ಕರ್ನಾಟಕ  ಕಾಂಗ್ರೆಸ್‌ನಲ್ಲೀಗ ಬಿಕ್ಕಟ್ಟಿನ ಪರಿಸ್ಥಿತಿ ಎದುರಾಗಿದೆ. ಸಿದ್ದರಾಮಯ್ಯ ಬೆಂಬಲಿತ ಹಿರಿಯ ಶಾಸಕರಿಂದ ಪಕ್ಷದ ಸಚಿವರ ವಿರುದ್ಧವೇ ಸಿಎಂಗೆ ದೂರು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement
Advertisement
ಬಿ.ಕೆ. ಹರಿಪ್ರಸಾದ್ ಈಚೆಗೆ ಸಿಎಂ ಕೆಳಗಿಳಿಸೋದು ಗೊತ್ತು, ಆಯ್ಕೆ ಮಾಡೋದು ಗೊತ್ತು ಎಂದು ಹೇಳಿಕೆ ನೀಡಿದ್ದರು. ತಮಗೆ ಸಚಿವ ಸ್ಥಾನ ಸಿಗದಿದ್ದ ಬಗ್ಗೆ ಈ ರೀತಿ ಅಸಮಾಧಾನ ಹೊರಹಾಕಿದ್ದರೆ. ಇದರ ಬೆನ್ನಲ್ಲೇ ಪಕ್ಷದ ಸಚಿವರ ವಿರುದ್ಧ ಹಿರಿಯ ಶಾಸಕರು ಅಸಮಾಧಾನ ಹೊರಹಾಕಿ ಸಿಎಂ ಮುಂದೆ ಹೋಗಿದ್ದಾರೆ. ಸರ್ಕಾರ ರಚನೆಯಾದ 2 ತಿಂಗಳಲ್ಲೇ ಅಸಮಾಧಾನ ಸ್ಫೋಟಿಸಿದ್ದು, ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಶಾಸಕರು ಒತ್ತಾಯಿಸಿದ್ದಾರೆ. ಇದೇ ಜು.27ಕ್ಕೆ ಸಭೆ ಕರೆಯಲಾಗಿದೆ. ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದಕ್ಕೆ ಈ ಬೆಳವಣಿಗೆ ನಿದರ್ಶನದಂತೆ ತೋರುತ್ತಿದೆ.

ಈ ಬೆಳವಣಿಗೆ ‘ಕೈ’ ಪಾಳಯದಲ್ಲಿ ನಾನಾ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕಷ್ಟೆ ಒಗ್ಗಟ್ಟು, ಒಳಗೊಳಗೆ ಬಿಕ್ಕಟ್ಟು ಎಂಬ ಪರಿಸ್ಥಿತಿ ಇದೆಯಾ? ಮನೆಯೊಂದು ಮೂರು ಬಾಗಿಲು ಎಂಬಂತಾಯ್ತಾ ಕಾಂಗ್ರೆಸ್ ಸ್ಥಿತಿ? ಸಿದ್ದರಾಮಯ್ಯ ವರ್ಸಸ್ ಅದರ್ಸ್ ಫೈಟ್ ಸಹ ಪಕ್ಷ ಹಾಗೂ ಸರ್ಕಾರದ ಮಟ್ಟದಲ್ಲಿ ಒಳಗೊಳಗೆ ಕೆಲಸ ಶುರು ಮಾಡಿದೆಯಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

Advertisement

ಇದು ಸಚಿವ ಸ್ಥಾನ ವಂಚಿತ ಮಾಜಿ ಸಚಿವರು ಹಾಗೂ ಹಿರಿಯ ಶಾಸಕರ ಅಸಮಾಧಾನ ಎನ್ನಲಾಗುತ್ತಿದೆ. ಸಚಿವ ಸ್ಥಾನವೂ ಸಿಗಲಿಲ್ಲಾ. ಅತ್ತ ಹಿರಿತನಕ್ಕೆ ಗೌರವವೂ ಸಿಗುತ್ತಿಲ್ಲಾ. ಸಚಿವರಾಗಬೇಕಿದ್ದವರು ಅದನ್ನು ಕಳೆದುಕೊಂಡಿದ್ದೇವೆ. ಸಚಿವರಾದವರು ನಮ್ಮ ಹಿರಿತನಕ್ಕೆ ಗೌರವ ಕೊಡುತ್ತಿಲ್ಲಾ. ನಾವೇ ಆಗಬೇಕಿದ್ದ ಸಚಿವ ಸ್ಥಾನ ಇವರಿಗೆ ಸಿಕ್ಕಿದೆ. ನಮಗೆ ಗೌರವ ಸಿಗುತ್ತಿಲ್ಲಾ ಎನ್ನುವುದು ಅವರ ಅಸಮಾಧಾನ ಎಂದು ಮೂಲಗಳು ತಿಳಿಸಿವೆ. ನಮ್ಮ ಸ್ಥಾನದಲ್ಲಿ ಅವರು, ಅವರ ಸ್ಥಾನದಲ್ಲಿ ನಾವು. ನಮ್ಮ ಹಿರಿತನಕ್ಕೆ ಗೌರವ ಇಲ್ಲ. ಇದು ಸಚಿವ ಸ್ಥಾನ ವಂಚಿತ ಹಿರಿಯ ಶಾಸಕ ಹಾಗೂ ಮಾಜಿ ಸಚಿವರ ಅಸಮಾಧಾನದ ಮೂಲಗಳು ಮಾಹಿತಿ ನೀಡಿವೆ.

(Source :Online Network )

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

14 hours ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳದ ಏಳನೇ ಆವೃತ್ತಿ : ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

14 hours ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

15 hours ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

15 hours ago

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

1 day ago