ಭಾರತದಲ್ಲಿ ಕೃಷಿ ಬೆಳವಣಿಗೆಯಾಗುತ್ತಿದೆ. ಉತ್ಪಾದಕತೆಯೂ ಹೆಚ್ಚುತ್ತಿದೆ. ಆದರೆ ಈಗ ಬೇಕಿರುವುದು ಪೌಷ್ಟಿಕಾಂಶವಾಗಿರುವ ಆಹಾರ. ಇದಕ್ಕಾಗಿ ಕನಿಷ್ಠ 25% ಕೃಷಿಯನ್ನು ಸಾವಯವ ಮತ್ತು ನೈಸರ್ಗಿಕ ಕೃಷಿ ತಂತ್ರಗಳನ್ನು ಬಳಸಿ ಮಾಡಬೇಕು ಎಂದು ಸಚಿವ ಕೈಲಾಶ್ ಚೌಧರಿ ಅಭಿಪ್ರಾಯಪಟ್ಟಿದ್ದಾರೆ.
‘ರಾಗಿ (ಶ್ರೀ ಅನ್ನ) ಮೂಲಕ ಪೌಷ್ಟಿಕಾಂಶ, ಆಹಾರ ಮತ್ತು ಪರಿಸರ ಭದ್ರತೆ’ ಎಂಬ ವಿಷಯದಲ್ಲಿ 3 ದಿನಗಳ ಪೂಸಾ ಕೃಷಿ ವಿಜ್ಞಾನ ಮೇಳವು ನವದೆಹಲಿಯ ಐಸಿಎಆರ್-ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ಕ್ಯಾಂಪಸ್ನಲ್ಲಿ ಮುಕ್ತಾಯಗೊಂಡಿತು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವ ಕೈಲಾಶ್ ಚೌಧರಿ ಭಾಗವಹಿಸಿದ್ದರು. ಈ ಸಂದರ್ಭ ಅವರು ಕನಿಷ್ಠ 25% ಕೃಷಿಯನ್ನು ಸಾವಯವ ಮತ್ತು ನೈಸರ್ಗಿಕ ಕೃಷಿ ತಂತ್ರಗಳನ್ನು ಬಳಸಿ ಮಾಡಬೇಕು ಎಂದು ಪ್ರತಿಪಾದಿಸಿದರು.
ಭಾರತದ ಕೃಷಿ ಉತ್ಪಾದನೆಯು 2013-14 ರಲ್ಲಿ 265 ಮಿಲಿಯನ್ ಟನ್ಗಳಿತ್ತು. ಕಳೆದ ವರ್ಷ 315 ಮೆಟ್ರಿಕ್ ಟನ್ ಗೆ ಏರಿಕೆಯಾಗಿದೆ ಮತ್ತು ಈ ಆರ್ಥಿಕ ವರ್ಷದಲ್ಲಿ 324 ಮೆಟ್ರಿಕ್ ಟನ್ ತಲುಪುವ ನಿರೀಕ್ಷೆಯಿದೆ ಎಂದು ಸಚಿವ ಕೈಲಾಶ್ ಚೌಧರಿ ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತ ಕಲ್ಯಾಣದ ನಾಲ್ಕು ಹಂತಗಳ ಗುರಿಯನ್ನು ಹೊಂದಿದ್ದಾರೆ, ಉತ್ತಮ ಗುಣಮಟ್ಟದ ಬೀಜಗಳು, ಕಡಿಮೆ ಕೆಲಸದ ವೆಚ್ಚಗಳು, ಸಂಗ್ರಹಣೆ ಮತ್ತು ಸಾರಿಗೆಯನ್ನು ಸುಧಾರಿಸಿ ಮತ್ತು ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಮಾರುಕಟ್ಟೆಗಳನ್ನು ಸಕ್ರಿಯಗೊಳಿಸಲು ಕೆಲಸ ಮಾಡಲಾಗುತ್ತಿದೆ. ಕೃಷಿ ಸಚಿವಾಲಯವು ಐಸಿಎಆರ್ಗೆ ಕನಿಷ್ಠ 25% ಕೃಷಿ ಭೂಮಿಯನ್ನು ಸಾವಯವ ಮತ್ತು ನೈಸರ್ಗಿಕ ಕೃಷಿ ತಂತ್ರಗಳನ್ನು ಬಳಸಿ ಕೃಷಿ ಮಾಡುವುದಕ್ಕೆ ನಿರ್ದೇಶಿಸಿದೆ ಎಂದು ಚೌಧರಿ ಹೇಳಿದರು. ಪೌಷ್ಟಿಕಾಂಶದ ಭದ್ರತೆಗಾಗಿ ರಾಗಿ ತಳಿಗಳನ್ನು ಅಭಿವೃದ್ಧಿಪಡಿಸಲು ಕೆಲಸ ಮಾಡುವ ಮಹತ್ವವನ್ನು ಅವರು ಹೇಳಿದರು. ಆಧುನಿಕ ತಂತ್ರಜ್ಞಾನಗಳು ಮತ್ತು ಬೆಳೆ ತಳಿಗಳು ತ್ವರಿತವಾಗಿ ರೈತರಿಗೆ ತಲುಪಬೇಕು ಎಂದು ಅವರು ಹೇಳಿದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…