Advertisement
ಸುದ್ದಿಗಳು

ಭಾರತದ ಕೃಷಿ ಉತ್ಪಾದನೆಯಲ್ಲಿ ಏರಿಕೆ | ಕನಿಷ್ಟ 25 % ಸಾವಯವ ಮತ್ತು ನೈಸರ್ಗಿಕ ಕೃಷಿ ತಂತ್ರಗಳು ದೇಶಕ್ಕೆ ಅನಿವಾರ್ಯ |

Share

ಭಾರತದಲ್ಲಿ ಕೃಷಿ ಬೆಳವಣಿಗೆಯಾಗುತ್ತಿದೆ. ಉತ್ಪಾದಕತೆಯೂ ಹೆಚ್ಚುತ್ತಿದೆ. ಆದರೆ ಈಗ ಬೇಕಿರುವುದು  ಪೌಷ್ಟಿಕಾಂಶವಾಗಿರುವ ಆಹಾರ. ಇದಕ್ಕಾಗಿ ಕನಿಷ್ಠ 25% ಕೃಷಿಯನ್ನು ಸಾವಯವ ಮತ್ತು ನೈಸರ್ಗಿಕ ಕೃಷಿ ತಂತ್ರಗಳನ್ನು ಬಳಸಿ ಮಾಡಬೇಕು ಎಂದು ಸಚಿವ ಕೈಲಾಶ್ ಚೌಧರಿ ಅಭಿಪ್ರಾಯಪಟ್ಟಿದ್ದಾರೆ.

‘ರಾಗಿ (ಶ್ರೀ ಅನ್ನ) ಮೂಲಕ ಪೌಷ್ಟಿಕಾಂಶ, ಆಹಾರ ಮತ್ತು ಪರಿಸರ ಭದ್ರತೆ’ ಎಂಬ ವಿಷಯದಲ್ಲಿ  3 ದಿನಗಳ ಪೂಸಾ ಕೃಷಿ ವಿಜ್ಞಾನ ಮೇಳವು ನವದೆಹಲಿಯ ಐಸಿಎಆರ್-ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ಕ್ಯಾಂಪಸ್‌ನಲ್ಲಿ ಮುಕ್ತಾಯಗೊಂಡಿತು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವ ಕೈಲಾಶ್ ಚೌಧರಿ ಭಾಗವಹಿಸಿದ್ದರು. ಈ ಸಂದರ್ಭ ಅವರು  ಕನಿಷ್ಠ 25% ಕೃಷಿಯನ್ನು ಸಾವಯವ ಮತ್ತು ನೈಸರ್ಗಿಕ ಕೃಷಿ ತಂತ್ರಗಳನ್ನು ಬಳಸಿ ಮಾಡಬೇಕು ಎಂದು ಪ್ರತಿಪಾದಿಸಿದರು.

ಭಾರತದ ಕೃಷಿ ಉತ್ಪಾದನೆಯು 2013-14 ರಲ್ಲಿ 265 ಮಿಲಿಯನ್ ಟನ್‌ಗಳಿತ್ತು. ಕಳೆದ ವರ್ಷ 315 ಮೆಟ್ರಿಕ್‌ ಟನ್ ಗೆ ಏರಿಕೆಯಾಗಿದೆ ಮತ್ತು ಈ ಆರ್ಥಿಕ ವರ್ಷದಲ್ಲಿ 324 ಮೆಟ್ರಿಕ್‌ ಟನ್ ತಲುಪುವ ನಿರೀಕ್ಷೆಯಿದೆ ಎಂದು  ಸಚಿವ ಕೈಲಾಶ್ ಚೌಧರಿ ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತ ಕಲ್ಯಾಣದ ನಾಲ್ಕು ಹಂತಗಳ ಗುರಿಯನ್ನು ಹೊಂದಿದ್ದಾರೆ,  ಉತ್ತಮ ಗುಣಮಟ್ಟದ ಬೀಜಗಳು, ಕಡಿಮೆ ಕೆಲಸದ ವೆಚ್ಚಗಳು, ಸಂಗ್ರಹಣೆ ಮತ್ತು ಸಾರಿಗೆಯನ್ನು ಸುಧಾರಿಸಿ ಮತ್ತು ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಮಾರುಕಟ್ಟೆಗಳನ್ನು ಸಕ್ರಿಯಗೊಳಿಸಲು ಕೆಲಸ ಮಾಡಲಾಗುತ್ತಿದೆ. ಕೃಷಿ ಸಚಿವಾಲಯವು ಐಸಿಎಆರ್‌ಗೆ ಕನಿಷ್ಠ 25% ಕೃಷಿ ಭೂಮಿಯನ್ನು ಸಾವಯವ ಮತ್ತು ನೈಸರ್ಗಿಕ ಕೃಷಿ ತಂತ್ರಗಳನ್ನು ಬಳಸಿ ಕೃಷಿ ಮಾಡುವುದಕ್ಕೆ ನಿರ್ದೇಶಿಸಿದೆ ಎಂದು ಚೌಧರಿ ಹೇಳಿದರು. ಪೌಷ್ಟಿಕಾಂಶದ ಭದ್ರತೆಗಾಗಿ ರಾಗಿ ತಳಿಗಳನ್ನು ಅಭಿವೃದ್ಧಿಪಡಿಸಲು ಕೆಲಸ ಮಾಡುವ ಮಹತ್ವವನ್ನು ಅವರು ಹೇಳಿದರು. ಆಧುನಿಕ ತಂತ್ರಜ್ಞಾನಗಳು ಮತ್ತು ಬೆಳೆ ತಳಿಗಳು ತ್ವರಿತವಾಗಿ ರೈತರಿಗೆ ತಲುಪಬೇಕು  ಎಂದು ಅವರು ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

6 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

12 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

12 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago