ಕೋಲಾರ ನಗರಸಭೆಯಿಂದ ಬೃಹತ್ ಕಾರ್ಯಾಚರಣೆ | 2,500 ಟನ್ ಕಟ್ಟಡ ತ್ಯಾಜ್ಯ ತೆರವು

December 29, 2025
7:06 AM

ಹಲವು ವರ್ಷಗಳಿಂದ ಕೋಲಾರ ನಗರದ ರಸ್ತೆಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಂಗ್ರಹವಾಗಿದ್ದ ಕಟ್ಟಡ ಮತ್ತು ಪಾರಂಪರಿಕ ತ್ಯಾಜ್ಯವನ್ನು ತೆರವುಗೊಳಿಸುವ ಕಾರ್ಯ ನಿರಂತರ ನಡೆಯುತ್ತಿದ್ದು ಈವರೆಗೆ ಸುಮಾರು 2 ಸಾವಿರದ 500 ಟನ್ ತ್ಯಾಜ್ಯ ತೆರವುಗೊಳಿಸಲಾಗಿದೆ ಎಂದು ನಗರಸಭೆ ಆಯುಕ್ತ ನವೀನ್‌ಚಂದ್ರ ತಿಳಿಸಿದ್ದಾರೆ. ನಗರ ಹೊರವಲಯದ ಬಂಗಾರಪೇಟೆ ಬೈಪಾಸ್‌ನಿಂದ ಬೇತಮಂಗಲ ಮೇಲ್ಸೇತುವೆ ವರೆಗಿನ ಮುಖ್ಯ ರಸ್ತೆಯ ಎರಡೂ ಬದಿ, ಮಣಿಘಟ್ಟ, ಸ್ಯಾನಿಟೋರಿಯಂ ಪ್ರದೇಶ, ನಗರ ಬಸ್ ನಿಲ್ದಾಣ ಹಿಂಭಾಗದಲ್ಲಿದ್ದ ಕಟ್ಟಡ ತ್ಯಾಜ್ಯ ಮತ್ತು ಪಾರಂಪರಿಕ ತ್ಯಾಜ್ಯವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ ಎಂದರು. ಕಾರ್ಯಾಚರಣೆಯಲ್ಲಿ 16 ಟಿಪ್ಪರ್  ಹಾಗೂ 10 ಜೆಸಿಬಿ ಯಂತ್ರಗಳನ್ನು ಬಳಸಲಾಗಿತ್ತು. ತೆರವುಗೊಳಿಸಲಾದ  ಕಟ್ಟಡ ತ್ಯಾಜ್ಯವನ್ನು ಅರಾಬಿಕೊತ್ತನೂರು ಸಮೀಪದ ಕೆಂದಟ್ಟಿಯ ಕ್ರಷರ್ ಹಳ್ಳಕ್ಕೆ ಸಾಗಿಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror