ಹಲವು ವರ್ಷಗಳಿಂದ ಕೋಲಾರ ನಗರದ ರಸ್ತೆಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಂಗ್ರಹವಾಗಿದ್ದ ಕಟ್ಟಡ ಮತ್ತು ಪಾರಂಪರಿಕ ತ್ಯಾಜ್ಯವನ್ನು ತೆರವುಗೊಳಿಸುವ ಕಾರ್ಯ ನಿರಂತರ ನಡೆಯುತ್ತಿದ್ದು ಈವರೆಗೆ ಸುಮಾರು 2 ಸಾವಿರದ 500 ಟನ್ ತ್ಯಾಜ್ಯ ತೆರವುಗೊಳಿಸಲಾಗಿದೆ ಎಂದು ನಗರಸಭೆ ಆಯುಕ್ತ ನವೀನ್ಚಂದ್ರ ತಿಳಿಸಿದ್ದಾರೆ. ನಗರ ಹೊರವಲಯದ ಬಂಗಾರಪೇಟೆ ಬೈಪಾಸ್ನಿಂದ ಬೇತಮಂಗಲ ಮೇಲ್ಸೇತುವೆ ವರೆಗಿನ ಮುಖ್ಯ ರಸ್ತೆಯ ಎರಡೂ ಬದಿ, ಮಣಿಘಟ್ಟ, ಸ್ಯಾನಿಟೋರಿಯಂ ಪ್ರದೇಶ, ನಗರ ಬಸ್ ನಿಲ್ದಾಣ ಹಿಂಭಾಗದಲ್ಲಿದ್ದ ಕಟ್ಟಡ ತ್ಯಾಜ್ಯ ಮತ್ತು ಪಾರಂಪರಿಕ ತ್ಯಾಜ್ಯವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ ಎಂದರು. ಕಾರ್ಯಾಚರಣೆಯಲ್ಲಿ 16 ಟಿಪ್ಪರ್ ಹಾಗೂ 10 ಜೆಸಿಬಿ ಯಂತ್ರಗಳನ್ನು ಬಳಸಲಾಗಿತ್ತು. ತೆರವುಗೊಳಿಸಲಾದ ಕಟ್ಟಡ ತ್ಯಾಜ್ಯವನ್ನು ಅರಾಬಿಕೊತ್ತನೂರು ಸಮೀಪದ ಕೆಂದಟ್ಟಿಯ ಕ್ರಷರ್ ಹಳ್ಳಕ್ಕೆ ಸಾಗಿಸಲಾಯಿತು.
ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡ ನಂತರವೂ ವರ್ಷಗಳ ಬಳಿಕ ಮತ್ತೆ ರೋಗ ಕಾಣಿಸಿಕೊಳ್ಳುವುದಕ್ಕೆ…
ಪ್ರಕೃತಿಯಲ್ಲಿ ಇರುವ ಡಿಎನ್ಎ, ಪ್ರೋಟೀನ್ಗಳಂತೆ ಪ್ಲಾಸ್ಟಿಕ್ಗಳನ್ನೂ ಕೂಡಾ ನಿಗದಿತ ಅವಧಿಯಲ್ಲಿ ಸ್ವಯಂ ಕರಗುವಂತೆ…
2026ರಲ್ಲಿ ಕೃಷಿ ಕ್ಷೇತ್ರ ಸ್ಥಿರಗೊಳ್ಳುವ ನಿರೀಕ್ಷೆಯಿದ್ದರೂ, ವಿವಿಧ ಬೆಳೆಗಳ ನಡುವೆ ಅಸಮಾನ ಸ್ಥಿತಿಗಳು…
ವಿಶ್ವಾದ್ಯಂತ ಶಾಖದ ಅಲೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)…
ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ…
ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗಿ ಬಿಟ್ಟರೆ ಅಂದರೆ ನಿಯಂತ್ರಣ ತಪ್ಪಿದರೆ ವಿವಿಧ ಸಮಸ್ಯೆ ಉಂಟಾಗುತ್ತದೆ. ಮನುಷ್ಯನ…