ಹಲವು ವರ್ಷಗಳಿಂದ ಕೋಲಾರ ನಗರದ ರಸ್ತೆಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಂಗ್ರಹವಾಗಿದ್ದ ಕಟ್ಟಡ ಮತ್ತು ಪಾರಂಪರಿಕ ತ್ಯಾಜ್ಯವನ್ನು ತೆರವುಗೊಳಿಸುವ ಕಾರ್ಯ ನಿರಂತರ ನಡೆಯುತ್ತಿದ್ದು ಈವರೆಗೆ ಸುಮಾರು 2 ಸಾವಿರದ 500 ಟನ್ ತ್ಯಾಜ್ಯ ತೆರವುಗೊಳಿಸಲಾಗಿದೆ ಎಂದು ನಗರಸಭೆ ಆಯುಕ್ತ ನವೀನ್ಚಂದ್ರ ತಿಳಿಸಿದ್ದಾರೆ. ನಗರ ಹೊರವಲಯದ ಬಂಗಾರಪೇಟೆ ಬೈಪಾಸ್ನಿಂದ ಬೇತಮಂಗಲ ಮೇಲ್ಸೇತುವೆ ವರೆಗಿನ ಮುಖ್ಯ ರಸ್ತೆಯ ಎರಡೂ ಬದಿ, ಮಣಿಘಟ್ಟ, ಸ್ಯಾನಿಟೋರಿಯಂ ಪ್ರದೇಶ, ನಗರ ಬಸ್ ನಿಲ್ದಾಣ ಹಿಂಭಾಗದಲ್ಲಿದ್ದ ಕಟ್ಟಡ ತ್ಯಾಜ್ಯ ಮತ್ತು ಪಾರಂಪರಿಕ ತ್ಯಾಜ್ಯವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ ಎಂದರು. ಕಾರ್ಯಾಚರಣೆಯಲ್ಲಿ 16 ಟಿಪ್ಪರ್ ಹಾಗೂ 10 ಜೆಸಿಬಿ ಯಂತ್ರಗಳನ್ನು ಬಳಸಲಾಗಿತ್ತು. ತೆರವುಗೊಳಿಸಲಾದ ಕಟ್ಟಡ ತ್ಯಾಜ್ಯವನ್ನು ಅರಾಬಿಕೊತ್ತನೂರು ಸಮೀಪದ ಕೆಂದಟ್ಟಿಯ ಕ್ರಷರ್ ಹಳ್ಳಕ್ಕೆ ಸಾಗಿಸಲಾಯಿತು.
ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…
ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…
ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…
ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…
ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…
19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…