ಹಲವು ವರ್ಷಗಳಿಂದ ಕೋಲಾರ ನಗರದ ರಸ್ತೆಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಂಗ್ರಹವಾಗಿದ್ದ ಕಟ್ಟಡ ಮತ್ತು ಪಾರಂಪರಿಕ ತ್ಯಾಜ್ಯವನ್ನು ತೆರವುಗೊಳಿಸುವ ಕಾರ್ಯ ನಿರಂತರ ನಡೆಯುತ್ತಿದ್ದು ಈವರೆಗೆ ಸುಮಾರು 2 ಸಾವಿರದ 500 ಟನ್ ತ್ಯಾಜ್ಯ ತೆರವುಗೊಳಿಸಲಾಗಿದೆ ಎಂದು ನಗರಸಭೆ ಆಯುಕ್ತ ನವೀನ್ಚಂದ್ರ ತಿಳಿಸಿದ್ದಾರೆ. ನಗರ ಹೊರವಲಯದ ಬಂಗಾರಪೇಟೆ ಬೈಪಾಸ್ನಿಂದ ಬೇತಮಂಗಲ ಮೇಲ್ಸೇತುವೆ ವರೆಗಿನ ಮುಖ್ಯ ರಸ್ತೆಯ ಎರಡೂ ಬದಿ, ಮಣಿಘಟ್ಟ, ಸ್ಯಾನಿಟೋರಿಯಂ ಪ್ರದೇಶ, ನಗರ ಬಸ್ ನಿಲ್ದಾಣ ಹಿಂಭಾಗದಲ್ಲಿದ್ದ ಕಟ್ಟಡ ತ್ಯಾಜ್ಯ ಮತ್ತು ಪಾರಂಪರಿಕ ತ್ಯಾಜ್ಯವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ ಎಂದರು. ಕಾರ್ಯಾಚರಣೆಯಲ್ಲಿ 16 ಟಿಪ್ಪರ್ ಹಾಗೂ 10 ಜೆಸಿಬಿ ಯಂತ್ರಗಳನ್ನು ಬಳಸಲಾಗಿತ್ತು. ತೆರವುಗೊಳಿಸಲಾದ ಕಟ್ಟಡ ತ್ಯಾಜ್ಯವನ್ನು ಅರಾಬಿಕೊತ್ತನೂರು ಸಮೀಪದ ಕೆಂದಟ್ಟಿಯ ಕ್ರಷರ್ ಹಳ್ಳಕ್ಕೆ ಸಾಗಿಸಲಾಯಿತು.
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…
ಪ್ರತಿಯೊಂದು ಮಾತಿಗೂ ತಕ್ಷಣ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಕೆಲವೊಮ್ಮೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮೌನವೇ ಉತ್ತಮ…