ಹಲವು ವರ್ಷಗಳಿಂದ ಕೋಲಾರ ನಗರದ ರಸ್ತೆಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಂಗ್ರಹವಾಗಿದ್ದ ಕಟ್ಟಡ ಮತ್ತು ಪಾರಂಪರಿಕ ತ್ಯಾಜ್ಯವನ್ನು ತೆರವುಗೊಳಿಸುವ ಕಾರ್ಯ ನಿರಂತರ ನಡೆಯುತ್ತಿದ್ದು ಈವರೆಗೆ ಸುಮಾರು 2 ಸಾವಿರದ 500 ಟನ್ ತ್ಯಾಜ್ಯ ತೆರವುಗೊಳಿಸಲಾಗಿದೆ ಎಂದು ನಗರಸಭೆ ಆಯುಕ್ತ ನವೀನ್ಚಂದ್ರ ತಿಳಿಸಿದ್ದಾರೆ. ನಗರ ಹೊರವಲಯದ ಬಂಗಾರಪೇಟೆ ಬೈಪಾಸ್ನಿಂದ ಬೇತಮಂಗಲ ಮೇಲ್ಸೇತುವೆ ವರೆಗಿನ ಮುಖ್ಯ ರಸ್ತೆಯ ಎರಡೂ ಬದಿ, ಮಣಿಘಟ್ಟ, ಸ್ಯಾನಿಟೋರಿಯಂ ಪ್ರದೇಶ, ನಗರ ಬಸ್ ನಿಲ್ದಾಣ ಹಿಂಭಾಗದಲ್ಲಿದ್ದ ಕಟ್ಟಡ ತ್ಯಾಜ್ಯ ಮತ್ತು ಪಾರಂಪರಿಕ ತ್ಯಾಜ್ಯವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ ಎಂದರು. ಕಾರ್ಯಾಚರಣೆಯಲ್ಲಿ 16 ಟಿಪ್ಪರ್ ಹಾಗೂ 10 ಜೆಸಿಬಿ ಯಂತ್ರಗಳನ್ನು ಬಳಸಲಾಗಿತ್ತು. ತೆರವುಗೊಳಿಸಲಾದ ಕಟ್ಟಡ ತ್ಯಾಜ್ಯವನ್ನು ಅರಾಬಿಕೊತ್ತನೂರು ಸಮೀಪದ ಕೆಂದಟ್ಟಿಯ ಕ್ರಷರ್ ಹಳ್ಳಕ್ಕೆ ಸಾಗಿಸಲಾಯಿತು.
ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು…
ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…