ಹಲವು ವರ್ಷಗಳಿಂದ ಕೋಲಾರ ನಗರದ ರಸ್ತೆಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಂಗ್ರಹವಾಗಿದ್ದ ಕಟ್ಟಡ ಮತ್ತು ಪಾರಂಪರಿಕ ತ್ಯಾಜ್ಯವನ್ನು ತೆರವುಗೊಳಿಸುವ ಕಾರ್ಯ ನಿರಂತರ ನಡೆಯುತ್ತಿದ್ದು ಈವರೆಗೆ ಸುಮಾರು 2 ಸಾವಿರದ 500 ಟನ್ ತ್ಯಾಜ್ಯ ತೆರವುಗೊಳಿಸಲಾಗಿದೆ ಎಂದು ನಗರಸಭೆ ಆಯುಕ್ತ ನವೀನ್ಚಂದ್ರ ತಿಳಿಸಿದ್ದಾರೆ. ನಗರ ಹೊರವಲಯದ ಬಂಗಾರಪೇಟೆ ಬೈಪಾಸ್ನಿಂದ ಬೇತಮಂಗಲ ಮೇಲ್ಸೇತುವೆ ವರೆಗಿನ ಮುಖ್ಯ ರಸ್ತೆಯ ಎರಡೂ ಬದಿ, ಮಣಿಘಟ್ಟ, ಸ್ಯಾನಿಟೋರಿಯಂ ಪ್ರದೇಶ, ನಗರ ಬಸ್ ನಿಲ್ದಾಣ ಹಿಂಭಾಗದಲ್ಲಿದ್ದ ಕಟ್ಟಡ ತ್ಯಾಜ್ಯ ಮತ್ತು ಪಾರಂಪರಿಕ ತ್ಯಾಜ್ಯವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ ಎಂದರು. ಕಾರ್ಯಾಚರಣೆಯಲ್ಲಿ 16 ಟಿಪ್ಪರ್ ಹಾಗೂ 10 ಜೆಸಿಬಿ ಯಂತ್ರಗಳನ್ನು ಬಳಸಲಾಗಿತ್ತು. ತೆರವುಗೊಳಿಸಲಾದ ಕಟ್ಟಡ ತ್ಯಾಜ್ಯವನ್ನು ಅರಾಬಿಕೊತ್ತನೂರು ಸಮೀಪದ ಕೆಂದಟ್ಟಿಯ ಕ್ರಷರ್ ಹಳ್ಳಕ್ಕೆ ಸಾಗಿಸಲಾಯಿತು.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…