ಹಲವು ವರ್ಷಗಳಿಂದ ಕೋಲಾರ ನಗರದ ರಸ್ತೆಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಂಗ್ರಹವಾಗಿದ್ದ ಕಟ್ಟಡ ಮತ್ತು ಪಾರಂಪರಿಕ ತ್ಯಾಜ್ಯವನ್ನು ತೆರವುಗೊಳಿಸುವ ಕಾರ್ಯ ನಿರಂತರ ನಡೆಯುತ್ತಿದ್ದು ಈವರೆಗೆ ಸುಮಾರು 2 ಸಾವಿರದ 500 ಟನ್ ತ್ಯಾಜ್ಯ ತೆರವುಗೊಳಿಸಲಾಗಿದೆ ಎಂದು ನಗರಸಭೆ ಆಯುಕ್ತ ನವೀನ್ಚಂದ್ರ ತಿಳಿಸಿದ್ದಾರೆ. ನಗರ ಹೊರವಲಯದ ಬಂಗಾರಪೇಟೆ ಬೈಪಾಸ್ನಿಂದ ಬೇತಮಂಗಲ ಮೇಲ್ಸೇತುವೆ ವರೆಗಿನ ಮುಖ್ಯ ರಸ್ತೆಯ ಎರಡೂ ಬದಿ, ಮಣಿಘಟ್ಟ, ಸ್ಯಾನಿಟೋರಿಯಂ ಪ್ರದೇಶ, ನಗರ ಬಸ್ ನಿಲ್ದಾಣ ಹಿಂಭಾಗದಲ್ಲಿದ್ದ ಕಟ್ಟಡ ತ್ಯಾಜ್ಯ ಮತ್ತು ಪಾರಂಪರಿಕ ತ್ಯಾಜ್ಯವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ ಎಂದರು. ಕಾರ್ಯಾಚರಣೆಯಲ್ಲಿ 16 ಟಿಪ್ಪರ್ ಹಾಗೂ 10 ಜೆಸಿಬಿ ಯಂತ್ರಗಳನ್ನು ಬಳಸಲಾಗಿತ್ತು. ತೆರವುಗೊಳಿಸಲಾದ ಕಟ್ಟಡ ತ್ಯಾಜ್ಯವನ್ನು ಅರಾಬಿಕೊತ್ತನೂರು ಸಮೀಪದ ಕೆಂದಟ್ಟಿಯ ಕ್ರಷರ್ ಹಳ್ಳಕ್ಕೆ ಸಾಗಿಸಲಾಯಿತು.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…