ಹಲವು ವರ್ಷಗಳಿಂದ ಕೋಲಾರ ನಗರದ ರಸ್ತೆಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಂಗ್ರಹವಾಗಿದ್ದ ಕಟ್ಟಡ ಮತ್ತು ಪಾರಂಪರಿಕ ತ್ಯಾಜ್ಯವನ್ನು ತೆರವುಗೊಳಿಸುವ ಕಾರ್ಯ ನಿರಂತರ ನಡೆಯುತ್ತಿದ್ದು ಈವರೆಗೆ ಸುಮಾರು 2 ಸಾವಿರದ 500 ಟನ್ ತ್ಯಾಜ್ಯ ತೆರವುಗೊಳಿಸಲಾಗಿದೆ ಎಂದು ನಗರಸಭೆ ಆಯುಕ್ತ ನವೀನ್ಚಂದ್ರ ತಿಳಿಸಿದ್ದಾರೆ. ನಗರ ಹೊರವಲಯದ ಬಂಗಾರಪೇಟೆ ಬೈಪಾಸ್ನಿಂದ ಬೇತಮಂಗಲ ಮೇಲ್ಸೇತುವೆ ವರೆಗಿನ ಮುಖ್ಯ ರಸ್ತೆಯ ಎರಡೂ ಬದಿ, ಮಣಿಘಟ್ಟ, ಸ್ಯಾನಿಟೋರಿಯಂ ಪ್ರದೇಶ, ನಗರ ಬಸ್ ನಿಲ್ದಾಣ ಹಿಂಭಾಗದಲ್ಲಿದ್ದ ಕಟ್ಟಡ ತ್ಯಾಜ್ಯ ಮತ್ತು ಪಾರಂಪರಿಕ ತ್ಯಾಜ್ಯವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ ಎಂದರು. ಕಾರ್ಯಾಚರಣೆಯಲ್ಲಿ 16 ಟಿಪ್ಪರ್ ಹಾಗೂ 10 ಜೆಸಿಬಿ ಯಂತ್ರಗಳನ್ನು ಬಳಸಲಾಗಿತ್ತು. ತೆರವುಗೊಳಿಸಲಾದ ಕಟ್ಟಡ ತ್ಯಾಜ್ಯವನ್ನು ಅರಾಬಿಕೊತ್ತನೂರು ಸಮೀಪದ ಕೆಂದಟ್ಟಿಯ ಕ್ರಷರ್ ಹಳ್ಳಕ್ಕೆ ಸಾಗಿಸಲಾಯಿತು.
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…