ಈ ಭೂಮಿ ಹುಟ್ಟಿದಾಗಿನಿಂದ ಮಾನವ ಹಾಗೂ ಪ್ರಾಣಿ ಸಂಘರ್ಷ ಇದ್ದದ್ದೇ.. ಆದರೆ ಕಾಡು ಮಾಯವಾಗಿ ನಾಡು ಬೆಳದಂತೆಲ್ಲಾ ವನ್ಯ ಜೀವಿಗಳ ದಾಳಿ ಜಾಸ್ತಿಯಾಗಿದೆ. ವನ್ಯ ಪ್ರಾಣಿಗಳ ದಾಳಿಯಿಂದ ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ. ಈ ವರ್ಷದ ಮೊದಲಾರ್ಧದಲ್ಲಿ 28 ಜನ ಮೃತ ಪಟ್ಟಿದ್ದಾರೆ.
ಸೆ.04ರಂದು ಮತ್ತೊಂದು ದುರ್ಘಟನೆ ಸಂಭವಿಸಿದೆ. ಹುಲಿ #Tigher ದಾಳಿಯಿಂದ ಚರಣ್ ನಾಯ್ಕ್ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆ ವೆಂಕಟೇಶ್ ಆನೆ #Elephant ತುಳಿತಕ್ಕೆ ಬಲಿಯಾಗಿದ್ದಾರೆ. ಮಾನವ ಪ್ರಾಣಿ ಸಂಘರ್ಷದ ಬಗ್ಗೆ ಚರ್ಚೆ ಮಾಡಿದ್ದೇವೆ. ಜೀವಹಾನಿ ಆಗದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ಆಗಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲಲಿ ಮಾತನಾಡಿದ ಅವರು, ಜನವಸತಿ ಪ್ರದೇಶಕ್ಕೆ ಆನೆ ಬರದಂತೆ ತಡೆಯಲು 640 ಕಿಮೀ ರೈಲ್ವೆ ಬ್ಯಾರಿಕೇಡ್ ಹಾಕಬೇಕಿದೆ. ಹೆಚ್ಚುವರಿ 300 ಕಿಮೀ ರೈಲ್ವೆ ಬ್ಯಾರಿಕೇಡ್ ಹಾಕಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಿದ್ದೇನೆ. 1000 ಕಿಮೀ ಸೋಲಾರ್ ತಂತಿ ಅಳವಡಿಸಲಾಗಿದೆ. 7 ಎಲಿಫೆಂಟಾ ಟಾಸ್ಕ್ ಫೋರ್ಸ್ ಗಳನ್ನು ರಚನೆ ಮಾಡಿದ್ದೇವೆ. ಇದರಲ್ಲಿ 38 ಜನ ನುರಿತವರು ಇರುತ್ತಾರೆ ಎಂದರು ತಿಳಿಸಿದರು.
ಇನ್ನು ವನ್ಯ ಪ್ರಾಣಿಗಳಿಂದ ಹೊರ ಗುತ್ತಿಗೆಯ ಇಬ್ಬರು ನೌಕರರು ಮೃತ ಪಟ್ಟಿದ್ದಾರೆ. ಮುಂದೆ ಸಮಸ್ಯೆ ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ. ಅರಣ್ಯ ಸಮೀಪ ಇರುವ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ. ವನ್ಯ ಜೀವಿಗಳ ದಾಳಿಯಿಂದ ಮೃತಪಟ್ಟವರಿಗೆ ಪರಿಹಾರ ನೀಡಿದ್ದೇವೆ. ಗಣಿಗಾರಿಕೆಯಿಂದಲೂ ವನ್ಯ ಜೀವಿಗಳು ಕಾಡಿಗೆ ಬರುತ್ತಿವೆ. ಕಾಡಿನಂಚಿನಲ್ಲಿ ಗಣಿಗಾರಿಕೆಗೆ ಅವಕಾಶ ಇಲ್ಲ ಎಂದು ಎಚ್ಚರಿಕೆ ನೀಡಿದರು.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…