Advertisement
ಪ್ರಮುಖ

ನಿಲ್ಲದ ಮಾನವ-ಪ್ರಾಣಿ ಸಂಘರ್ಷ | ಕಳೆದ 6 ತಿಂಗಳಲ್ಲಿ 28 ಜನ ಬಲಿ | ಸಚಿವ ಈಶ್ವರ್​ ಖಂಡ್ರೆ |

Share

ಈ ಭೂಮಿ ಹುಟ್ಟಿದಾಗಿನಿಂದ ಮಾನವ ಹಾಗೂ ಪ್ರಾಣಿ ಸಂಘರ್ಷ ಇದ್ದದ್ದೇ.. ಆದರೆ ಕಾಡು ಮಾಯವಾಗಿ ನಾಡು ಬೆಳದಂತೆಲ್ಲಾ ವನ್ಯ ಜೀವಿಗಳ ದಾಳಿ ಜಾಸ್ತಿಯಾಗಿದೆ.  ವನ್ಯ ಪ್ರಾಣಿಗಳ ದಾಳಿಯಿಂದ ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ. ಈ ವರ್ಷದ ಮೊದಲಾರ್ಧದಲ್ಲಿ 28 ಜನ ಮೃತ ಪಟ್ಟಿದ್ದಾರೆ.

ಸೆ.04ರಂದು ಮತ್ತೊಂದು ದುರ್ಘಟನೆ ಸಂಭವಿಸಿದೆ. ಹುಲಿ #Tigher ದಾಳಿಯಿಂದ ಚರಣ್ ನಾಯ್ಕ್ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆ ವೆಂಕಟೇಶ್ ಆನೆ #Elephant ತುಳಿತಕ್ಕೆ ಬಲಿಯಾಗಿದ್ದಾರೆ. ಮಾನವ ಪ್ರಾಣಿ ಸಂಘರ್ಷದ ಬಗ್ಗೆ ಚರ್ಚೆ ಮಾಡಿದ್ದೇವೆ. ಜೀವಹಾನಿ ಆಗದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ಆಗಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲಲಿ ಮಾತನಾಡಿದ ಅವರು, ಜನವಸತಿ ಪ್ರದೇಶಕ್ಕೆ ಆನೆ ಬರದಂತೆ ತಡೆಯಲು 640 ಕಿಮೀ ರೈಲ್ವೆ ಬ್ಯಾರಿಕೇಡ್ ಹಾಕಬೇಕಿದೆ. ಹೆಚ್ಚುವರಿ 300 ಕಿಮೀ ರೈಲ್ವೆ ಬ್ಯಾರಿಕೇಡ್ ಹಾಕಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಿದ್ದೇನೆ. 1000 ಕಿಮೀ ಸೋಲಾರ್ ತಂತಿ ಅಳವಡಿಸಲಾಗಿದೆ. 7 ಎಲಿಫೆಂಟಾ ಟಾಸ್ಕ್ ಫೋರ್ಸ್ ಗಳನ್ನು ರಚನೆ ಮಾಡಿದ್ದೇವೆ. ಇದರಲ್ಲಿ 38 ಜನ ನುರಿತವರು ಇರುತ್ತಾರೆ ಎಂದರು ತಿಳಿಸಿದರು.

ಇನ್ನು ವನ್ಯ ಪ್ರಾಣಿಗಳಿಂದ ಹೊರ ಗುತ್ತಿಗೆಯ ಇಬ್ಬರು ನೌಕರರು ಮೃತ ಪಟ್ಟಿದ್ದಾರೆ. ಮುಂದೆ ಸಮಸ್ಯೆ ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ. ಅರಣ್ಯ ಸಮೀಪ ಇರುವ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ. ವನ್ಯ ಜೀವಿಗಳ ದಾಳಿಯಿಂದ ಮೃತಪಟ್ಟವರಿಗೆ ಪರಿಹಾರ ನೀಡಿದ್ದೇವೆ. ಗಣಿಗಾರಿಕೆಯಿಂದಲೂ ವನ್ಯ ಜೀವಿಗಳು ಕಾಡಿಗೆ ಬರುತ್ತಿವೆ. ಕಾಡಿನಂಚಿನಲ್ಲಿ ಗಣಿಗಾರಿಕೆಗೆ ಅವಕಾಶ ಇಲ್ಲ ಎಂದು ಎಚ್ಚರಿಕೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

2 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

22 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago