ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

April 8, 2025
2:30 PM
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ, ದಕ್ಷಿಣ ಕನ್ನಡ 93.57% ರಷ್ಟು ಉತ್ತೀರ್ಣರಾಗಿದ್ದು, ಯಾದಗಿರಿ 48.45% ರಷ್ಟು ಕೊನೆಯ ಸ್ಥಾನದಲ್ಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಒಟ್ಟಾರೆ ಶೇಕಡಾವಾರು 73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪರೀಕ್ಷೆಗೆ ಹಾಜರಾದ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತ್ಯುತ್ತಮ ಸ್ಥಾನ ಗಳಿಸಿದ್ದಾರೆ ಎಂದು  ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ  ತಿಳಿಸಿದ್ದಾರೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ, ದಕ್ಷಿಣ ಕನ್ನಡ 93.57% ರಷ್ಟು ಉತ್ತೀರ್ಣರಾಗಿದ್ದು, ಯಾದಗಿರಿ 48.45% ರಷ್ಟು ಕೊನೆಯ ಸ್ಥಾನದಲ್ಲಿದೆ.

Advertisement

ಕಲೆ, ವಿಜ್ಞಾನ ಮತ್ತು ವಾಣಿಜ್ಯ ಮೂರೂ ವಿಭಾಗಗಳಲ್ಲಿಯೂ ಹುಡುಗಿಯರು  ಹೆಚ್ಚಿನ ಸಾಧನೆ ಮಾಡಿದ್ದಾರೆ.  ಬಳ್ಳಾರಿಯ ಎಲ್.ಆರ್. ಸಂಜನಾ ಬಾಯಿ 597 ಅಂಕಗಳೊಂದಿಗೆ ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ, ದಕ್ಷಿಣ ಕನ್ನಡದ ದೀಪಶ್ರೀ ಎಸ್ 599 ಅಂಕಗಳೊಂದಿಗೆ ವಾಣಿಜ್ಯ ವಿಭಾಗದಲ್ಲಿ ಮತ್ತು ದಕ್ಷಿಣ ಕನ್ನಡದವರೇ ಆದ ಅಮೂಲ್ಯ ಕಾಮತ್ ವಿಜ್ಞಾನ ವಿಭಾಗದಲ್ಲಿ 599 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್
July 7, 2025
11:04 PM
by: ದ ರೂರಲ್ ಮಿರರ್.ಕಾಂ
ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್
July 7, 2025
9:25 PM
by: ದ ರೂರಲ್ ಮಿರರ್.ಕಾಂ
ಮೆಕ್ಕೆಜೋಳ ಸಮಾವೇಶ | ಕನಿಷ್ಠ ಬೆಂಬಲ ಬೆಲೆ ಮೂಲಕ ರೈತರ ಹಿತರಕ್ಷಣೆ
July 7, 2025
9:17 PM
by: The Rural Mirror ಸುದ್ದಿಜಾಲ
ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರದೇಶ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧ
July 7, 2025
8:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group