ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಒಟ್ಟಾರೆ ಶೇಕಡಾವಾರು 73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪರೀಕ್ಷೆಗೆ ಹಾಜರಾದ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತ್ಯುತ್ತಮ ಸ್ಥಾನ ಗಳಿಸಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ, ದಕ್ಷಿಣ ಕನ್ನಡ 93.57% ರಷ್ಟು ಉತ್ತೀರ್ಣರಾಗಿದ್ದು, ಯಾದಗಿರಿ 48.45% ರಷ್ಟು ಕೊನೆಯ ಸ್ಥಾನದಲ್ಲಿದೆ.
ಕಲೆ, ವಿಜ್ಞಾನ ಮತ್ತು ವಾಣಿಜ್ಯ ಮೂರೂ ವಿಭಾಗಗಳಲ್ಲಿಯೂ ಹುಡುಗಿಯರು ಹೆಚ್ಚಿನ ಸಾಧನೆ ಮಾಡಿದ್ದಾರೆ. ಬಳ್ಳಾರಿಯ ಎಲ್.ಆರ್. ಸಂಜನಾ ಬಾಯಿ 597 ಅಂಕಗಳೊಂದಿಗೆ ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ, ದಕ್ಷಿಣ ಕನ್ನಡದ ದೀಪಶ್ರೀ ಎಸ್ 599 ಅಂಕಗಳೊಂದಿಗೆ ವಾಣಿಜ್ಯ ವಿಭಾಗದಲ್ಲಿ ಮತ್ತು ದಕ್ಷಿಣ ಕನ್ನಡದವರೇ ಆದ ಅಮೂಲ್ಯ ಕಾಮತ್ ವಿಜ್ಞಾನ ವಿಭಾಗದಲ್ಲಿ 599 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…