ಪೈಲಾರು: 3 ನೇ ಹಂತದ ವೃಕ್ಷಾರೋಹಣ ಕಾರ್ಯಕ್ರಮ

August 19, 2019
6:00 PM

ಪೈಲಾರು: ಯುವಜನ ಸಂಯುಕ್ತ ಮಂಡಳಿ  ಸುಳ್ಯ ,ಫ್ರೆಂಡ್ಸ್ ಕ್ವಬ್ ಪೈಲಾರು, ಶೌರ್ಯ ಯುವತಿ ಮಂಡಲ ಪೈಲಾರು, ಮಿತ್ರ ಕ್ರೀಡಾ ಮತ್ತು ಕಲಾ ಸಂಘ ರಾಗಿಯಡ್ಕ ಇದರ ಜಂಟಿ ಆಶ್ರಯದಲ್ಲಿ 3 ನೇ ಹಂತದ ವೃಕ್ಷಾರೋಹಣ ಕಾರ್ಯಕ್ರಮ ಪಂಜ ವಲಯ ರಕ್ಷಿತಾರಣ್ಯದ ರಾಗಿಯಡ್ಕ ಪರಿಸರದಲ್ಲಿ ನಡೆಯಿತು.

ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ  ಶಂಕರ್ ಪೆರಾಜೆ ಗಿಡ ನೆಟ್ಟು ಕಾರ್ಯಕ್ರಮ ಕ್ಕೆ ಚಾಲನೆ ನೀಡಿ “ಪರಿಸರ ಸಂರಕ್ಷಣೆ ಗೆ ನಾವೆಲ್ಲ ಕಟಿಬದ್ಧರಾಗಬೇಕು.ಅನಾಹುತ ಸಂಭವಿಸುವ ನಾವೆಲ್ಲ ಎಚ್ಚೆತ್ತುಕೊಳ್ಳಬೇಕು” ಎಂದರು.

ಮಿತ್ರ ಕ್ರೀಡಾ ಸಂಘದ ಸ್ಥಾಪಕಾಧ್ಯಕ್ಷ ಯತೀಶ್ ಹಿರಿಯಡ್ಕ, ಅಧ್ಯಕ್ಷ ಪುನೀತ್ ಕೆರೆಗದ್ದೆ, ಶೌರ್ಯ ಯುವತಿ ಮಂಡಲದ ಅಧ್ಯಕ್ಷೆ ಯಕ್ಷಿತಾ ಪಾರೆ,ಕಾರ್ಯದರ್ಶಿ ಜಯಶ್ರೀ
ಕುಳ್ಳಂಪಾಡಿ,ಫ್ರೆಂಡ್ಸ್ ಕ್ಲಬ್ ನ ಕೋಶಾಧಿಕಾರಿ ಸಾತ್ವಿಕ್ ಮಡಪ್ಪಾಡಿ ಉಪಸ್ಥಿತರಿದ್ದರು.

ಯಕ್ಷಿತಾ ಪಾರೆ ಸ್ವಾಗತಿಸಿ ,ಯತೀಶ್ ಹಿರಿಯಡ್ಕ ಧನ್ಯವಾದಗೈದರು.ತೇಜಸ್ವಿ ಕಡಪಳ ನಿರೂಪಿಸಿದರು. ಸಾಗುವಾನಿ,ಪುನರ್ಪುಳಿ,ನೇರಳೆ,ಮಾಗುವಾನಿ,ರಾಮಪತ್ರೆ ಮುಂತಾದ ಬಹುಪಯೋಗಿ ಗಿಡಗಳನ್ನು ನೆಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ
July 30, 2026
4:18 PM
by: ಸಾಯಿಶೇಖರ್ ಕರಿಕಳ
ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ
July 30, 2026
7:39 AM
by: ದ ರೂರಲ್ ಮಿರರ್.ಕಾಂ
ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ
July 30, 2026
7:26 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?
July 29, 2026
2:00 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror