ಪೈಲಾರು: ಯುವಜನ ಸಂಯುಕ್ತ ಮಂಡಳಿ ಸುಳ್ಯ ,ಫ್ರೆಂಡ್ಸ್ ಕ್ವಬ್ ಪೈಲಾರು, ಶೌರ್ಯ ಯುವತಿ ಮಂಡಲ ಪೈಲಾರು, ಮಿತ್ರ ಕ್ರೀಡಾ ಮತ್ತು ಕಲಾ ಸಂಘ ರಾಗಿಯಡ್ಕ ಇದರ ಜಂಟಿ ಆಶ್ರಯದಲ್ಲಿ 3 ನೇ ಹಂತದ ವೃಕ್ಷಾರೋಹಣ ಕಾರ್ಯಕ್ರಮ ಪಂಜ ವಲಯ ರಕ್ಷಿತಾರಣ್ಯದ ರಾಗಿಯಡ್ಕ ಪರಿಸರದಲ್ಲಿ ನಡೆಯಿತು.
ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ಶಂಕರ್ ಪೆರಾಜೆ ಗಿಡ ನೆಟ್ಟು ಕಾರ್ಯಕ್ರಮ ಕ್ಕೆ ಚಾಲನೆ ನೀಡಿ “ಪರಿಸರ ಸಂರಕ್ಷಣೆ ಗೆ ನಾವೆಲ್ಲ ಕಟಿಬದ್ಧರಾಗಬೇಕು.ಅನಾಹುತ ಸಂಭವಿಸುವ ನಾವೆಲ್ಲ ಎಚ್ಚೆತ್ತುಕೊಳ್ಳಬೇಕು” ಎಂದರು.
ಮಿತ್ರ ಕ್ರೀಡಾ ಸಂಘದ ಸ್ಥಾಪಕಾಧ್ಯಕ್ಷ ಯತೀಶ್ ಹಿರಿಯಡ್ಕ, ಅಧ್ಯಕ್ಷ ಪುನೀತ್ ಕೆರೆಗದ್ದೆ, ಶೌರ್ಯ ಯುವತಿ ಮಂಡಲದ ಅಧ್ಯಕ್ಷೆ ಯಕ್ಷಿತಾ ಪಾರೆ,ಕಾರ್ಯದರ್ಶಿ ಜಯಶ್ರೀ
ಕುಳ್ಳಂಪಾಡಿ,ಫ್ರೆಂಡ್ಸ್ ಕ್ಲಬ್ ನ ಕೋಶಾಧಿಕಾರಿ ಸಾತ್ವಿಕ್ ಮಡಪ್ಪಾಡಿ ಉಪಸ್ಥಿತರಿದ್ದರು.
ಯಕ್ಷಿತಾ ಪಾರೆ ಸ್ವಾಗತಿಸಿ ,ಯತೀಶ್ ಹಿರಿಯಡ್ಕ ಧನ್ಯವಾದಗೈದರು.ತೇಜಸ್ವಿ ಕಡಪಳ ನಿರೂಪಿಸಿದರು. ಸಾಗುವಾನಿ,ಪುನರ್ಪುಳಿ,ನೇರಳೆ,ಮಾಗುವಾನಿ,ರಾಮಪತ್ರೆ ಮುಂತಾದ ಬಹುಪಯೋಗಿ ಗಿಡಗಳನ್ನು ನೆಡಲಾಯಿತು.
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…