ಪೈಲಾರು: ಯುವಜನ ಸಂಯುಕ್ತ ಮಂಡಳಿ ಸುಳ್ಯ ,ಫ್ರೆಂಡ್ಸ್ ಕ್ವಬ್ ಪೈಲಾರು, ಶೌರ್ಯ ಯುವತಿ ಮಂಡಲ ಪೈಲಾರು, ಮಿತ್ರ ಕ್ರೀಡಾ ಮತ್ತು ಕಲಾ ಸಂಘ ರಾಗಿಯಡ್ಕ ಇದರ ಜಂಟಿ ಆಶ್ರಯದಲ್ಲಿ 3 ನೇ ಹಂತದ ವೃಕ್ಷಾರೋಹಣ ಕಾರ್ಯಕ್ರಮ ಪಂಜ ವಲಯ ರಕ್ಷಿತಾರಣ್ಯದ ರಾಗಿಯಡ್ಕ ಪರಿಸರದಲ್ಲಿ ನಡೆಯಿತು.
ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ಶಂಕರ್ ಪೆರಾಜೆ ಗಿಡ ನೆಟ್ಟು ಕಾರ್ಯಕ್ರಮ ಕ್ಕೆ ಚಾಲನೆ ನೀಡಿ “ಪರಿಸರ ಸಂರಕ್ಷಣೆ ಗೆ ನಾವೆಲ್ಲ ಕಟಿಬದ್ಧರಾಗಬೇಕು.ಅನಾಹುತ ಸಂಭವಿಸುವ ನಾವೆಲ್ಲ ಎಚ್ಚೆತ್ತುಕೊಳ್ಳಬೇಕು” ಎಂದರು.
ಮಿತ್ರ ಕ್ರೀಡಾ ಸಂಘದ ಸ್ಥಾಪಕಾಧ್ಯಕ್ಷ ಯತೀಶ್ ಹಿರಿಯಡ್ಕ, ಅಧ್ಯಕ್ಷ ಪುನೀತ್ ಕೆರೆಗದ್ದೆ, ಶೌರ್ಯ ಯುವತಿ ಮಂಡಲದ ಅಧ್ಯಕ್ಷೆ ಯಕ್ಷಿತಾ ಪಾರೆ,ಕಾರ್ಯದರ್ಶಿ ಜಯಶ್ರೀ
ಕುಳ್ಳಂಪಾಡಿ,ಫ್ರೆಂಡ್ಸ್ ಕ್ಲಬ್ ನ ಕೋಶಾಧಿಕಾರಿ ಸಾತ್ವಿಕ್ ಮಡಪ್ಪಾಡಿ ಉಪಸ್ಥಿತರಿದ್ದರು.
ಯಕ್ಷಿತಾ ಪಾರೆ ಸ್ವಾಗತಿಸಿ ,ಯತೀಶ್ ಹಿರಿಯಡ್ಕ ಧನ್ಯವಾದಗೈದರು.ತೇಜಸ್ವಿ ಕಡಪಳ ನಿರೂಪಿಸಿದರು. ಸಾಗುವಾನಿ,ಪುನರ್ಪುಳಿ,ನೇರಳೆ,ಮಾಗುವಾನಿ,ರಾಮಪತ್ರೆ ಮುಂತಾದ ಬಹುಪಯೋಗಿ ಗಿಡಗಳನ್ನು ನೆಡಲಾಯಿತು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…