Advertisement
ಕೃಷಿಮಾತು

ಗೋಧಿ ಇ-ಹರಾಜು | 3.85 ಲಕ್ಷ ಮೆಟ್ರಿಕ್ ಟನ್ ಮಾರಾಟ | ಹೊಸ ದಾಖಲೆ ಸೃಷ್ಟಿ |

Share

ಕೃಷಿ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಹೊಸ ಹೊಸ ತಂತ್ರಜ್ಞಾನ, ರೈತರ ಅನುಕೂಲಕ್ಕೆ ತಕ್ಕಂತ ಯೋಜನೆಗಳು, ಸಾಲ ಸೌಲಭ್ಯಗಳನ್ನು ಒದಗಿಸುತ್ತಿದೆ. ಇದೀಗ ಕೇಂದ್ರ ಸರ್ಕಾರವು ಗೋಧಿ ಹರಾಜಿನಲ್ಲಿ ಹೊಸ ದಾಖಲೆಯನ್ನೇ ಸೃಷ್ಟಿ ಮಾಡಿದೆ. ಕಳೆದ ವಾರ ಇ- ಹರಾಜಿನಲ್ಲಿ ಗೋಧಿ ಹರಾಜಿಗೆ ಮುಂದಾಗಿತ್ತು. ಈ ಪ್ರಕ್ರಿಯೆಯು ಎರಡನೇ ವಾರವೂ ಮುಂದುವರಿದಿದ್ದು, ಎರಡನೇ ಇ-ಹರಾಜಿನಲ್ಲಿ 3.85 ಲಕ್ಷ ಮೆಟ್ರಿಕ್ ಟನ್ ಗೋಧಿಯನ್ನು ಭಾರತೀಯ ಆಹಾರ ನಿಗಮವು 901 ಕೋಟಿ ರೂ.ಗೆ ಮಾರಾಟ ಮಾಡಿದೆ.

ದೇಶದಲ್ಲಿ ಹೆಚ್ಚುತ್ತಿರುವ ಗೋಧಿ ಮತ್ತು ಗೋಧಿ ಹಿಟ್ಟಿನ ಬೆಲೆಯನ್ನು ನಿಯಂತ್ರಿಸಲು ಮಂತ್ರಿ ಮಂಡಳಿಯ ಶಿಫಾರಸಿನ ಆಧಾರದ ಮೇಲೆ ಇ-ಹರಾಜು ಮೂಲಕ ಗೋಧಿಯನ್ನು ಮಾರಾಟ ಮಾಡಲಾಗುತ್ತಿದೆ.

ಫೆಬ್ರವರಿ 15, 2023ರಂದು ನಡೆದ ಎರಡನೇ ಇ-ಹರಾಜಿನಲ್ಲಿ  ಭಾರತೀಯ ಆಹಾರ ನಿಗಮವು 3.85 ಲಕ್ಷ ಮೆಟ್ರಿಕ್ ಟನ್ ಗೋಧಿಯನ್ನು ರೂ.901 ಕೋಟಿಗೆ ಮಾರಾಟ ಮಾಡಿದೆ. ಈ ಪ್ರಮಾಣದ ಗೋಧಿ ಮಾರಾಟವು ಇಲ್ಲಿಯವರೆಗೆ ಇ ಹರಾಜಿನಲ್ಲಿ ಮಾರಾಟವಾದ ಗೋಧಿ ಪ್ರಮಾಣ ದಾಖಲೆಯಾಗಿದೆ. ಎರಡನೇ ಇ-ಹರಾಜಿನಲ್ಲಿ  ಭಾರತೀಯ ಆಹಾರ ನಿಗಮವು 3.85 ಲಕ್ಷ ಮೆಟ್ರಿಕ್ ಟನ್ ಗೋಧಿಯನ್ನು ರೂ.901 ಕೋಟಿಗೆ ಮಾರಾಟ ಮಾಡಿದ್ದು, ಇದರಲ್ಲಿ 1060ಕ್ಕೂ ಹೆಚ್ಚು ಬಿಡ್‌ದಾರರು ಭಾಗವಹಿಸಿದ್ದರು.

ಈ ಹರಾಜಿನಲ್ಲಿ 15.25 ಲಕ್ಷ ಮೆಟ್ರಿಕ್‌ ಟನ್ ಗೋಧಿಯನ್ನು ಮಾರಾಟ ಮಾಡುವುದಾಗಿ ಘೋಷಿಸಲಾಗಿತ್ತು. 50-100 MT, 100-499 MT ಮತ್ತು 500-1000 MT ವ್ಯಾಪ್ತಿಯಲ್ಲಿ ಬಿಡ್‌ದಾರರು ಗೋಧಿಗಾಗಿ ಬಿಡ್‌ ಮಾಡಿದ ಕಾರಣ ಸಣ್ಣ ಮತ್ತು ಮಧ್ಯಮ ಗಿರಣಿ ಮಾಲೀಕರು ಮತ್ತು ವ್ಯಾಪಾರಿಗಳು ಹರಾಜಿನಲ್ಲಿ ಭಾಗವಹಿಸಿದ್ದಾರೆ ಎಂದು ಇ ಹರಾಜು ವರದಿ ತಿಳಿಸಿದೆ.

ಕೇವಲ 5 ಬಿಡ್‌ದಾರರು ಗರಿಷ್ಠ 3000 MTಗೆ ಏಕಕಾಲದಲ್ಲಿ ಬಿಡ್ ಮಾಡಿದ್ದಾರೆ.  ಪ್ರತಿ ಕ್ವಿಂಟಾಲ್‌ಗೆ ಸರಾಸರಿ 2338.01 ರೂ. ದರದಲ್ಲಿ ಬಿಡ್‌ಗಳು ಇದ್ದುದರಿಂದ, ಭಾರತೀಯ ಆಹಾರ ನಿಗಮವು ಮೊದಲ ಮಾರಾಟದಿಂದ 901 ಕೋಟಿ ರೂಪಾಯಿಯನ್ನು ಗಳಿಸಿದೆ.

ದೇಶದಲ್ಲಿ ಹೆಚ್ಚುತ್ತಿರುವ ಗೋಧಿ ಮತ್ತು ಗೋಧಿ ಹಿಟ್ಟಿನ ಬೆಲೆಯನ್ನು ನಿಯಂತ್ರಿಸಲು ಮಂತ್ರಿ ಮಂಡಳಿಯ ಶಿಫಾರಸಿನ ಆಧಾರದ ಮೇಲೆ ಇ-ಹರಾಜು ಮೂಲಕ ಗೋಧಿಯನ್ನು ಮಾರಾಟ ಮಾಡಲಾಗುತ್ತಿದೆ. ಅಂತಹ ಹರಾಜು ಮಾರಾಟವು ದೇಶದಾದ್ಯಂತ ಮಾರ್ಚ್ 2023 ರ 2 ನೇ ವಾರದವರೆಗೆ ಪ್ರತಿ ಬುಧವಾರ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

22 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago