Advertisement
ಕೃಷಿಮಾತು

ಗೋಧಿ ಇ-ಹರಾಜು | 3.85 ಲಕ್ಷ ಮೆಟ್ರಿಕ್ ಟನ್ ಮಾರಾಟ | ಹೊಸ ದಾಖಲೆ ಸೃಷ್ಟಿ |

Share

ಕೃಷಿ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಹೊಸ ಹೊಸ ತಂತ್ರಜ್ಞಾನ, ರೈತರ ಅನುಕೂಲಕ್ಕೆ ತಕ್ಕಂತ ಯೋಜನೆಗಳು, ಸಾಲ ಸೌಲಭ್ಯಗಳನ್ನು ಒದಗಿಸುತ್ತಿದೆ. ಇದೀಗ ಕೇಂದ್ರ ಸರ್ಕಾರವು ಗೋಧಿ ಹರಾಜಿನಲ್ಲಿ ಹೊಸ ದಾಖಲೆಯನ್ನೇ ಸೃಷ್ಟಿ ಮಾಡಿದೆ. ಕಳೆದ ವಾರ ಇ- ಹರಾಜಿನಲ್ಲಿ ಗೋಧಿ ಹರಾಜಿಗೆ ಮುಂದಾಗಿತ್ತು. ಈ ಪ್ರಕ್ರಿಯೆಯು ಎರಡನೇ ವಾರವೂ ಮುಂದುವರಿದಿದ್ದು, ಎರಡನೇ ಇ-ಹರಾಜಿನಲ್ಲಿ 3.85 ಲಕ್ಷ ಮೆಟ್ರಿಕ್ ಟನ್ ಗೋಧಿಯನ್ನು ಭಾರತೀಯ ಆಹಾರ ನಿಗಮವು 901 ಕೋಟಿ ರೂ.ಗೆ ಮಾರಾಟ ಮಾಡಿದೆ.

ದೇಶದಲ್ಲಿ ಹೆಚ್ಚುತ್ತಿರುವ ಗೋಧಿ ಮತ್ತು ಗೋಧಿ ಹಿಟ್ಟಿನ ಬೆಲೆಯನ್ನು ನಿಯಂತ್ರಿಸಲು ಮಂತ್ರಿ ಮಂಡಳಿಯ ಶಿಫಾರಸಿನ ಆಧಾರದ ಮೇಲೆ ಇ-ಹರಾಜು ಮೂಲಕ ಗೋಧಿಯನ್ನು ಮಾರಾಟ ಮಾಡಲಾಗುತ್ತಿದೆ.

ಫೆಬ್ರವರಿ 15, 2023ರಂದು ನಡೆದ ಎರಡನೇ ಇ-ಹರಾಜಿನಲ್ಲಿ  ಭಾರತೀಯ ಆಹಾರ ನಿಗಮವು 3.85 ಲಕ್ಷ ಮೆಟ್ರಿಕ್ ಟನ್ ಗೋಧಿಯನ್ನು ರೂ.901 ಕೋಟಿಗೆ ಮಾರಾಟ ಮಾಡಿದೆ. ಈ ಪ್ರಮಾಣದ ಗೋಧಿ ಮಾರಾಟವು ಇಲ್ಲಿಯವರೆಗೆ ಇ ಹರಾಜಿನಲ್ಲಿ ಮಾರಾಟವಾದ ಗೋಧಿ ಪ್ರಮಾಣ ದಾಖಲೆಯಾಗಿದೆ. ಎರಡನೇ ಇ-ಹರಾಜಿನಲ್ಲಿ  ಭಾರತೀಯ ಆಹಾರ ನಿಗಮವು 3.85 ಲಕ್ಷ ಮೆಟ್ರಿಕ್ ಟನ್ ಗೋಧಿಯನ್ನು ರೂ.901 ಕೋಟಿಗೆ ಮಾರಾಟ ಮಾಡಿದ್ದು, ಇದರಲ್ಲಿ 1060ಕ್ಕೂ ಹೆಚ್ಚು ಬಿಡ್‌ದಾರರು ಭಾಗವಹಿಸಿದ್ದರು.

ಈ ಹರಾಜಿನಲ್ಲಿ 15.25 ಲಕ್ಷ ಮೆಟ್ರಿಕ್‌ ಟನ್ ಗೋಧಿಯನ್ನು ಮಾರಾಟ ಮಾಡುವುದಾಗಿ ಘೋಷಿಸಲಾಗಿತ್ತು. 50-100 MT, 100-499 MT ಮತ್ತು 500-1000 MT ವ್ಯಾಪ್ತಿಯಲ್ಲಿ ಬಿಡ್‌ದಾರರು ಗೋಧಿಗಾಗಿ ಬಿಡ್‌ ಮಾಡಿದ ಕಾರಣ ಸಣ್ಣ ಮತ್ತು ಮಧ್ಯಮ ಗಿರಣಿ ಮಾಲೀಕರು ಮತ್ತು ವ್ಯಾಪಾರಿಗಳು ಹರಾಜಿನಲ್ಲಿ ಭಾಗವಹಿಸಿದ್ದಾರೆ ಎಂದು ಇ ಹರಾಜು ವರದಿ ತಿಳಿಸಿದೆ.

ಕೇವಲ 5 ಬಿಡ್‌ದಾರರು ಗರಿಷ್ಠ 3000 MTಗೆ ಏಕಕಾಲದಲ್ಲಿ ಬಿಡ್ ಮಾಡಿದ್ದಾರೆ.  ಪ್ರತಿ ಕ್ವಿಂಟಾಲ್‌ಗೆ ಸರಾಸರಿ 2338.01 ರೂ. ದರದಲ್ಲಿ ಬಿಡ್‌ಗಳು ಇದ್ದುದರಿಂದ, ಭಾರತೀಯ ಆಹಾರ ನಿಗಮವು ಮೊದಲ ಮಾರಾಟದಿಂದ 901 ಕೋಟಿ ರೂಪಾಯಿಯನ್ನು ಗಳಿಸಿದೆ.

ದೇಶದಲ್ಲಿ ಹೆಚ್ಚುತ್ತಿರುವ ಗೋಧಿ ಮತ್ತು ಗೋಧಿ ಹಿಟ್ಟಿನ ಬೆಲೆಯನ್ನು ನಿಯಂತ್ರಿಸಲು ಮಂತ್ರಿ ಮಂಡಳಿಯ ಶಿಫಾರಸಿನ ಆಧಾರದ ಮೇಲೆ ಇ-ಹರಾಜು ಮೂಲಕ ಗೋಧಿಯನ್ನು ಮಾರಾಟ ಮಾಡಲಾಗುತ್ತಿದೆ. ಅಂತಹ ಹರಾಜು ಮಾರಾಟವು ದೇಶದಾದ್ಯಂತ ಮಾರ್ಚ್ 2023 ರ 2 ನೇ ವಾರದವರೆಗೆ ಪ್ರತಿ ಬುಧವಾರ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

7 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

1 day ago