Advertisement
ಕೃಷಿಮಾತು

ಗೋಧಿ ಇ-ಹರಾಜು | 3.85 ಲಕ್ಷ ಮೆಟ್ರಿಕ್ ಟನ್ ಮಾರಾಟ | ಹೊಸ ದಾಖಲೆ ಸೃಷ್ಟಿ |

Share

ಕೃಷಿ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಹೊಸ ಹೊಸ ತಂತ್ರಜ್ಞಾನ, ರೈತರ ಅನುಕೂಲಕ್ಕೆ ತಕ್ಕಂತ ಯೋಜನೆಗಳು, ಸಾಲ ಸೌಲಭ್ಯಗಳನ್ನು ಒದಗಿಸುತ್ತಿದೆ. ಇದೀಗ ಕೇಂದ್ರ ಸರ್ಕಾರವು ಗೋಧಿ ಹರಾಜಿನಲ್ಲಿ ಹೊಸ ದಾಖಲೆಯನ್ನೇ ಸೃಷ್ಟಿ ಮಾಡಿದೆ. ಕಳೆದ ವಾರ ಇ- ಹರಾಜಿನಲ್ಲಿ ಗೋಧಿ ಹರಾಜಿಗೆ ಮುಂದಾಗಿತ್ತು. ಈ ಪ್ರಕ್ರಿಯೆಯು ಎರಡನೇ ವಾರವೂ ಮುಂದುವರಿದಿದ್ದು, ಎರಡನೇ ಇ-ಹರಾಜಿನಲ್ಲಿ 3.85 ಲಕ್ಷ ಮೆಟ್ರಿಕ್ ಟನ್ ಗೋಧಿಯನ್ನು ಭಾರತೀಯ ಆಹಾರ ನಿಗಮವು 901 ಕೋಟಿ ರೂ.ಗೆ ಮಾರಾಟ ಮಾಡಿದೆ.

ದೇಶದಲ್ಲಿ ಹೆಚ್ಚುತ್ತಿರುವ ಗೋಧಿ ಮತ್ತು ಗೋಧಿ ಹಿಟ್ಟಿನ ಬೆಲೆಯನ್ನು ನಿಯಂತ್ರಿಸಲು ಮಂತ್ರಿ ಮಂಡಳಿಯ ಶಿಫಾರಸಿನ ಆಧಾರದ ಮೇಲೆ ಇ-ಹರಾಜು ಮೂಲಕ ಗೋಧಿಯನ್ನು ಮಾರಾಟ ಮಾಡಲಾಗುತ್ತಿದೆ.

ಫೆಬ್ರವರಿ 15, 2023ರಂದು ನಡೆದ ಎರಡನೇ ಇ-ಹರಾಜಿನಲ್ಲಿ  ಭಾರತೀಯ ಆಹಾರ ನಿಗಮವು 3.85 ಲಕ್ಷ ಮೆಟ್ರಿಕ್ ಟನ್ ಗೋಧಿಯನ್ನು ರೂ.901 ಕೋಟಿಗೆ ಮಾರಾಟ ಮಾಡಿದೆ. ಈ ಪ್ರಮಾಣದ ಗೋಧಿ ಮಾರಾಟವು ಇಲ್ಲಿಯವರೆಗೆ ಇ ಹರಾಜಿನಲ್ಲಿ ಮಾರಾಟವಾದ ಗೋಧಿ ಪ್ರಮಾಣ ದಾಖಲೆಯಾಗಿದೆ. ಎರಡನೇ ಇ-ಹರಾಜಿನಲ್ಲಿ  ಭಾರತೀಯ ಆಹಾರ ನಿಗಮವು 3.85 ಲಕ್ಷ ಮೆಟ್ರಿಕ್ ಟನ್ ಗೋಧಿಯನ್ನು ರೂ.901 ಕೋಟಿಗೆ ಮಾರಾಟ ಮಾಡಿದ್ದು, ಇದರಲ್ಲಿ 1060ಕ್ಕೂ ಹೆಚ್ಚು ಬಿಡ್‌ದಾರರು ಭಾಗವಹಿಸಿದ್ದರು.

ಈ ಹರಾಜಿನಲ್ಲಿ 15.25 ಲಕ್ಷ ಮೆಟ್ರಿಕ್‌ ಟನ್ ಗೋಧಿಯನ್ನು ಮಾರಾಟ ಮಾಡುವುದಾಗಿ ಘೋಷಿಸಲಾಗಿತ್ತು. 50-100 MT, 100-499 MT ಮತ್ತು 500-1000 MT ವ್ಯಾಪ್ತಿಯಲ್ಲಿ ಬಿಡ್‌ದಾರರು ಗೋಧಿಗಾಗಿ ಬಿಡ್‌ ಮಾಡಿದ ಕಾರಣ ಸಣ್ಣ ಮತ್ತು ಮಧ್ಯಮ ಗಿರಣಿ ಮಾಲೀಕರು ಮತ್ತು ವ್ಯಾಪಾರಿಗಳು ಹರಾಜಿನಲ್ಲಿ ಭಾಗವಹಿಸಿದ್ದಾರೆ ಎಂದು ಇ ಹರಾಜು ವರದಿ ತಿಳಿಸಿದೆ.

ಕೇವಲ 5 ಬಿಡ್‌ದಾರರು ಗರಿಷ್ಠ 3000 MTಗೆ ಏಕಕಾಲದಲ್ಲಿ ಬಿಡ್ ಮಾಡಿದ್ದಾರೆ.  ಪ್ರತಿ ಕ್ವಿಂಟಾಲ್‌ಗೆ ಸರಾಸರಿ 2338.01 ರೂ. ದರದಲ್ಲಿ ಬಿಡ್‌ಗಳು ಇದ್ದುದರಿಂದ, ಭಾರತೀಯ ಆಹಾರ ನಿಗಮವು ಮೊದಲ ಮಾರಾಟದಿಂದ 901 ಕೋಟಿ ರೂಪಾಯಿಯನ್ನು ಗಳಿಸಿದೆ.

ದೇಶದಲ್ಲಿ ಹೆಚ್ಚುತ್ತಿರುವ ಗೋಧಿ ಮತ್ತು ಗೋಧಿ ಹಿಟ್ಟಿನ ಬೆಲೆಯನ್ನು ನಿಯಂತ್ರಿಸಲು ಮಂತ್ರಿ ಮಂಡಳಿಯ ಶಿಫಾರಸಿನ ಆಧಾರದ ಮೇಲೆ ಇ-ಹರಾಜು ಮೂಲಕ ಗೋಧಿಯನ್ನು ಮಾರಾಟ ಮಾಡಲಾಗುತ್ತಿದೆ. ಅಂತಹ ಹರಾಜು ಮಾರಾಟವು ದೇಶದಾದ್ಯಂತ ಮಾರ್ಚ್ 2023 ರ 2 ನೇ ವಾರದವರೆಗೆ ಪ್ರತಿ ಬುಧವಾರ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

9 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

13 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

20 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

20 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

1 day ago