Advertisement
ಕೃಷಿಮಾತು

ಗೋಧಿ ಇ-ಹರಾಜು | 3.85 ಲಕ್ಷ ಮೆಟ್ರಿಕ್ ಟನ್ ಮಾರಾಟ | ಹೊಸ ದಾಖಲೆ ಸೃಷ್ಟಿ |

Share

ಕೃಷಿ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಹೊಸ ಹೊಸ ತಂತ್ರಜ್ಞಾನ, ರೈತರ ಅನುಕೂಲಕ್ಕೆ ತಕ್ಕಂತ ಯೋಜನೆಗಳು, ಸಾಲ ಸೌಲಭ್ಯಗಳನ್ನು ಒದಗಿಸುತ್ತಿದೆ. ಇದೀಗ ಕೇಂದ್ರ ಸರ್ಕಾರವು ಗೋಧಿ ಹರಾಜಿನಲ್ಲಿ ಹೊಸ ದಾಖಲೆಯನ್ನೇ ಸೃಷ್ಟಿ ಮಾಡಿದೆ. ಕಳೆದ ವಾರ ಇ- ಹರಾಜಿನಲ್ಲಿ ಗೋಧಿ ಹರಾಜಿಗೆ ಮುಂದಾಗಿತ್ತು. ಈ ಪ್ರಕ್ರಿಯೆಯು ಎರಡನೇ ವಾರವೂ ಮುಂದುವರಿದಿದ್ದು, ಎರಡನೇ ಇ-ಹರಾಜಿನಲ್ಲಿ 3.85 ಲಕ್ಷ ಮೆಟ್ರಿಕ್ ಟನ್ ಗೋಧಿಯನ್ನು ಭಾರತೀಯ ಆಹಾರ ನಿಗಮವು 901 ಕೋಟಿ ರೂ.ಗೆ ಮಾರಾಟ ಮಾಡಿದೆ.

Advertisement
Advertisement

ದೇಶದಲ್ಲಿ ಹೆಚ್ಚುತ್ತಿರುವ ಗೋಧಿ ಮತ್ತು ಗೋಧಿ ಹಿಟ್ಟಿನ ಬೆಲೆಯನ್ನು ನಿಯಂತ್ರಿಸಲು ಮಂತ್ರಿ ಮಂಡಳಿಯ ಶಿಫಾರಸಿನ ಆಧಾರದ ಮೇಲೆ ಇ-ಹರಾಜು ಮೂಲಕ ಗೋಧಿಯನ್ನು ಮಾರಾಟ ಮಾಡಲಾಗುತ್ತಿದೆ.

Advertisement

ಫೆಬ್ರವರಿ 15, 2023ರಂದು ನಡೆದ ಎರಡನೇ ಇ-ಹರಾಜಿನಲ್ಲಿ  ಭಾರತೀಯ ಆಹಾರ ನಿಗಮವು 3.85 ಲಕ್ಷ ಮೆಟ್ರಿಕ್ ಟನ್ ಗೋಧಿಯನ್ನು ರೂ.901 ಕೋಟಿಗೆ ಮಾರಾಟ ಮಾಡಿದೆ. ಈ ಪ್ರಮಾಣದ ಗೋಧಿ ಮಾರಾಟವು ಇಲ್ಲಿಯವರೆಗೆ ಇ ಹರಾಜಿನಲ್ಲಿ ಮಾರಾಟವಾದ ಗೋಧಿ ಪ್ರಮಾಣ ದಾಖಲೆಯಾಗಿದೆ. ಎರಡನೇ ಇ-ಹರಾಜಿನಲ್ಲಿ  ಭಾರತೀಯ ಆಹಾರ ನಿಗಮವು 3.85 ಲಕ್ಷ ಮೆಟ್ರಿಕ್ ಟನ್ ಗೋಧಿಯನ್ನು ರೂ.901 ಕೋಟಿಗೆ ಮಾರಾಟ ಮಾಡಿದ್ದು, ಇದರಲ್ಲಿ 1060ಕ್ಕೂ ಹೆಚ್ಚು ಬಿಡ್‌ದಾರರು ಭಾಗವಹಿಸಿದ್ದರು.

ಈ ಹರಾಜಿನಲ್ಲಿ 15.25 ಲಕ್ಷ ಮೆಟ್ರಿಕ್‌ ಟನ್ ಗೋಧಿಯನ್ನು ಮಾರಾಟ ಮಾಡುವುದಾಗಿ ಘೋಷಿಸಲಾಗಿತ್ತು. 50-100 MT, 100-499 MT ಮತ್ತು 500-1000 MT ವ್ಯಾಪ್ತಿಯಲ್ಲಿ ಬಿಡ್‌ದಾರರು ಗೋಧಿಗಾಗಿ ಬಿಡ್‌ ಮಾಡಿದ ಕಾರಣ ಸಣ್ಣ ಮತ್ತು ಮಧ್ಯಮ ಗಿರಣಿ ಮಾಲೀಕರು ಮತ್ತು ವ್ಯಾಪಾರಿಗಳು ಹರಾಜಿನಲ್ಲಿ ಭಾಗವಹಿಸಿದ್ದಾರೆ ಎಂದು ಇ ಹರಾಜು ವರದಿ ತಿಳಿಸಿದೆ.

Advertisement

ಕೇವಲ 5 ಬಿಡ್‌ದಾರರು ಗರಿಷ್ಠ 3000 MTಗೆ ಏಕಕಾಲದಲ್ಲಿ ಬಿಡ್ ಮಾಡಿದ್ದಾರೆ.  ಪ್ರತಿ ಕ್ವಿಂಟಾಲ್‌ಗೆ ಸರಾಸರಿ 2338.01 ರೂ. ದರದಲ್ಲಿ ಬಿಡ್‌ಗಳು ಇದ್ದುದರಿಂದ, ಭಾರತೀಯ ಆಹಾರ ನಿಗಮವು ಮೊದಲ ಮಾರಾಟದಿಂದ 901 ಕೋಟಿ ರೂಪಾಯಿಯನ್ನು ಗಳಿಸಿದೆ.

ದೇಶದಲ್ಲಿ ಹೆಚ್ಚುತ್ತಿರುವ ಗೋಧಿ ಮತ್ತು ಗೋಧಿ ಹಿಟ್ಟಿನ ಬೆಲೆಯನ್ನು ನಿಯಂತ್ರಿಸಲು ಮಂತ್ರಿ ಮಂಡಳಿಯ ಶಿಫಾರಸಿನ ಆಧಾರದ ಮೇಲೆ ಇ-ಹರಾಜು ಮೂಲಕ ಗೋಧಿಯನ್ನು ಮಾರಾಟ ಮಾಡಲಾಗುತ್ತಿದೆ. ಅಂತಹ ಹರಾಜು ಮಾರಾಟವು ದೇಶದಾದ್ಯಂತ ಮಾರ್ಚ್ 2023 ರ 2 ನೇ ವಾರದವರೆಗೆ ಪ್ರತಿ ಬುಧವಾರ ನಡೆಯಲಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

10 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

12 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago