ಮುಂಗಾರು ಮಳೆದೇಶಾದ್ಯಂತ ತನ್ನ ಅಬ್ಬರವನ್ನು ಮತ್ತಷ್ಟು ಹೆಚ್ಚಿಸಿದೆ. ಗುಜರಾತ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಭೀಕರ ಪ್ರವಾಹಕ್ಕೆ ಸಾವು ನೋವು ಉಂಟಾಗಿದೆ. ನೂರಾರು ಮಂದಿ ಮನೆ ಮಠ ಕಳೆದುಕೊಂಡಿದ್ದಾರೆ. ಈ ಮಧ್ಯೆ ಮತ್ತೆ ಹವಾಮಾನ ವೈಪರೀತ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.
ದೇಶಾದ್ಯಂತ ಮತ್ತೆ ಹವಾಮಾನ ವೈಪರೀತ್ಯ ಆಗುವ ಸಾಧ್ಯತೆ ಇದ್ದು, ಬಂಗಾಳ ಕೊಲ್ಲಿಯಲ್ಲಿ ಒಟ್ಟು 3 ಚಂಡಮಾರುತಗಳು ಪರಿಚಲನೆ ಉಂಟು ಮಾಡುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿದ್ದು, ಅದರ ಬೆನ್ನಲ್ಲೇ ಮತ್ತೊಂದು ಸುಳಿ ಸೃಷ್ಟಿಯಾಗಿದೆ. ಇದು ಪಶ್ಚಿಮ ಮಧ್ಯ ಮತ್ತು ವಾಯುವ್ಯ ಬಂಗಾಳ ಕೊಲ್ಲಿಯ ಮೇಲೆ ನೆಲೆಗೊಂಡಿದೆ. ಸಮುದ್ರ ಮಟ್ಟದಿಂದ 5.8 ಕಿಮೀ ಮತ್ತು 7.6 ಕಿಮೀ ನಡುವೆ ಹರಡಿದೆ ಎಂದು ಐಎಂಡಿ ತಿಳಿಸಿದೆ.
ಮಧ್ಯಪ್ರದೇಶದಲ್ಲಿ ಚಂಡಮಾರುತದ ಎಫೆಕ್ಟ್ ಈಗಾಗಲೇ ಉಂಟಾಗಿದ್ದು, ಇದರ ಪರಿಣಾಮ ಜೋರಾಗಿ ಇರುವುದಿಲ್ಲ. ಮತ್ತೊಂದು ಕಡಿಮೆ ಒತ್ತಡದ ಚಂಡಮಾರುತವು ದಕ್ಷಿಣ ಒಡಿಶಾ ಮತ್ತು ಪಕ್ಕದ ಪ್ರದೇಶಗಳಲ್ಲಿ ವಿಸ್ತರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಏತನ್ಮಧ್ಯೆ, ಕೋಲ್ಕತ್ತಾ ಸೇರಿದಂತೆ ದಕ್ಷಿಣ ಬಂಗಾಳದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ
ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ ಮಲೆನಾಡು ಭಾಗದಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಹುತೇಕ ಕಡೆ ನದಿಗಳು ಉಕ್ಕಿನ ಹರಿಯುತ್ತಿದ್ದು, ಅಪಾಯದ ಮಟ್ಟ ಮೀರಿ ಉಕ್ಕುತ್ತಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…