ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆಯಿಂದ ಬೆಳಗಾವಿಯ ಹೋಮ್ ಪಾರ್ಕ್ ನಲ್ಲಿ ಆಯೋಜಿಸಿರುವ ಮೂರು ದಿನಗಳ ಮಾವು ಹಾಗೂ ಜೇನು ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ದೊರೆಯಿತು.
ಮೇಳದಲ್ಲಿ ರೈತರ ಮಾವು, ಜೇನು ಪ್ರದರ್ಶನಕ್ಕಾಗಿ ಸುಮಾರು 24 ಮಳಿಗೆಗಳನ್ನು ತೆರೆಯಲಾಗಿದ್ದು, ಬೆಳಗಾವಿ, ಕಿತ್ತೂರು, ಖಾನಾಪುರ, ರತ್ನಗಿರಿ, ಪಂಡಪುರ, ದೇವಗಿರಿ, ದಕ್ಷಿಣ ಕನ್ನಡ, ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ ರೈತರ ಮಾವು ಮತ್ತು ಜೇನಿನ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.
ರೈತ ರಾಜೇಶ್ ಸಾವಳೇಕರ ಮಾತನಾಡಿ, ಕಳೆದ 25 ವರ್ಷಗಳಿಂದ ಕೃಷಿಯಲ್ಲಿ ತೊಡಗಿದ್ದು, ವೈವಿದ್ಯಮಯ ಮಾವು ಬೆಳೆಯುತ್ತಿದ್ದೇನೆ. ಪ್ರದರ್ಶನದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಜೇನು ಕೃಷಿಕ ಮಧುಕೇಶ್ವರ ಹೆಗಡೆ, ಜೇನು ಹಾಗೂ ಜೇನಿನ ಉತ್ಪನ್ನಗಳ ಉದ್ಯಮ ಸ್ಥಾಪಿಸಿದ್ದು, ಸಾಕಷ್ಟು ಮಂದಿ ಕೆಲಸ ಮಾಡುತ್ತಿದ್ದಾರೆ. ಜೇನು ಸಾಕಾಣಿಕೆ ಬಗ್ಗೆ , ಉಚಿತ ತರಬೇತಿ ನೀಡಲಾಗುತ್ತಿದ್ದು, ಉತ್ತಮ ಪ್ರಶಂಸೆ ವ್ಯಕ್ತವಾಗಿದೆ ಎಂದು ಹೇಳಿದರು.
ಮಾಂತೇಶ್ ಮುರಗೋಡ, ಪ್ರದರ್ಶನದಲ್ಲಿ ರೈತರು ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಶಾಸಕ ರಾಜು ಸೇಠ್, ಜಿಲ್ಲಾ ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುರಗೋಡ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ವೇಳೆ ಮಳಿಗೆಗಳಿಗೆ ಭೇಟಿ ನೀಡಿ, ಮಾವು , ಜೇನಿನ ಬಗ್ಗೆ ಮಾಹಿತಿ ಪಡೆದರು.
ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…
CAMPCO ಹಾಗೂ ಕೇಂದ್ರ ಸರ್ಕಾರದ ಪ್ರಕರಣಕ್ಕೆ ಸಂಬಂಧಿಸಿ 2026 ರ ಮೇ 26…
ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…
ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…