ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆಯಿಂದ ಬೆಳಗಾವಿಯ ಹೋಮ್ ಪಾರ್ಕ್ ನಲ್ಲಿ ಆಯೋಜಿಸಿರುವ ಮೂರು ದಿನಗಳ ಮಾವು ಹಾಗೂ ಜೇನು ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ದೊರೆಯಿತು.
ಮೇಳದಲ್ಲಿ ರೈತರ ಮಾವು, ಜೇನು ಪ್ರದರ್ಶನಕ್ಕಾಗಿ ಸುಮಾರು 24 ಮಳಿಗೆಗಳನ್ನು ತೆರೆಯಲಾಗಿದ್ದು, ಬೆಳಗಾವಿ, ಕಿತ್ತೂರು, ಖಾನಾಪುರ, ರತ್ನಗಿರಿ, ಪಂಡಪುರ, ದೇವಗಿರಿ, ದಕ್ಷಿಣ ಕನ್ನಡ, ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ ರೈತರ ಮಾವು ಮತ್ತು ಜೇನಿನ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.
ರೈತ ರಾಜೇಶ್ ಸಾವಳೇಕರ ಮಾತನಾಡಿ, ಕಳೆದ 25 ವರ್ಷಗಳಿಂದ ಕೃಷಿಯಲ್ಲಿ ತೊಡಗಿದ್ದು, ವೈವಿದ್ಯಮಯ ಮಾವು ಬೆಳೆಯುತ್ತಿದ್ದೇನೆ. ಪ್ರದರ್ಶನದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಜೇನು ಕೃಷಿಕ ಮಧುಕೇಶ್ವರ ಹೆಗಡೆ, ಜೇನು ಹಾಗೂ ಜೇನಿನ ಉತ್ಪನ್ನಗಳ ಉದ್ಯಮ ಸ್ಥಾಪಿಸಿದ್ದು, ಸಾಕಷ್ಟು ಮಂದಿ ಕೆಲಸ ಮಾಡುತ್ತಿದ್ದಾರೆ. ಜೇನು ಸಾಕಾಣಿಕೆ ಬಗ್ಗೆ , ಉಚಿತ ತರಬೇತಿ ನೀಡಲಾಗುತ್ತಿದ್ದು, ಉತ್ತಮ ಪ್ರಶಂಸೆ ವ್ಯಕ್ತವಾಗಿದೆ ಎಂದು ಹೇಳಿದರು.
ಮಾಂತೇಶ್ ಮುರಗೋಡ, ಪ್ರದರ್ಶನದಲ್ಲಿ ರೈತರು ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಶಾಸಕ ರಾಜು ಸೇಠ್, ಜಿಲ್ಲಾ ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುರಗೋಡ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ವೇಳೆ ಮಳಿಗೆಗಳಿಗೆ ಭೇಟಿ ನೀಡಿ, ಮಾವು , ಜೇನಿನ ಬಗ್ಗೆ ಮಾಹಿತಿ ಪಡೆದರು.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…