ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದೆ. ಕೃಷ್ಣ, ಭದ್ರಾ ಮೇಲ್ದಂಡೆ ಯೋಜನೆಗಳಿಂದಾಗಿ ಈ ಜಿಲ್ಲೆಯು 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ ಹೊಂದಿದೆ. ಅವಶ್ಯವಿರುವ, ಹೆಚ್ಚುವರಿಯಾಗಿ ಬೆಳೆಯುವ ಶಕ್ತಿ ಈ ಭಾಗದ ರೈತರಿಗಿದೆ. ಈ ನಿಟ್ಟಿನಲ್ಲಿ ಸರ್ಕಾರ ರೈತರಿಗಾಗಿ ನೀಡಿರುವ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಸಚಿವ ಶರಣ ಬಸಪ್ಪ ದರ್ಶನಾಪುರ ಹೇಳಿದರು.
ಯಾದಗಿರಿ ಜಿಲ್ಲೆಯ ಭೀಮರಾಯನಗುಡಿ ಕೃಷಿ ಮಹಾವಿದ್ಯಾಲಯದಲ್ಲಿ ಮುಂಗಾರು ಹಬ್ಬ, ನೈಸರ್ಗಿಕ ಕೃಷಿ ಕಾರ್ಯಾಗಾರ ಹಾಗೂ ಕೃಷಿ ಪರಿಕರ ಮಾರಾಟಗಾರರಿಗೆ ಕಾನೂನು ಅರಿವು ಕಾರ್ಯಾಗಾರ ನಡೆಯಿತು. ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣ ಬಸಪ್ಪ ದರ್ಶನಾಪುರ, ಕಾರ್ಯಾಗಾರವನ್ನು ಉದ್ಘಾಟಿಸಿದರು. ಜಿಲ್ಲಾಧಿಕಾರಿ ಡಾ. ಬಿ.ಸುಶೀಲಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಕೃಷಿ ವಿಜ್ಞಾನಿಗಳು, ಅಧಿಕಾರಿಗಳು ಹಾಗೂ ಸ್ಥಳೀಯ ರೈತರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…